ಜಾಗತೀಕರಣ ಮತ್ತು ಜಾನಪದ

Author : ಚಿ.ಸಿ. ನಿಂಗಣ್ಣ

Pages 88

₹ 50.00




Year of Publication: 2012
Published by: ಬಸವ ಪ್ರಕಾಶನ ಮತ್ತು ಪುಸ್ತಕ ವ್ಯಾಪಾರಿಗಳು
Address: ಸೂಪರ್ ಬಜಾರ, ಮುಖ್ಯರಸ್ತೆ, ಕಲಬುರಗಿ-585101
Phone: 9449825431

Synopsys

ಲೇಖಕ ಡಾ. ಚಿ.ಸಿ. ನಿಂಗಣ್ಣ ಅವರ ಲೇಖನಗಳ ಸಂಗ್ರಹ ಕೃತಿ-ಜಾಗತೀಕರಣ ಮತ್ತು ಜಾನಪದ. ಜಾಗತೀಕರಣದ ಆರಂಭಿಕ ಹಂತಗಳು, ಇವುಗಳ ಉದ್ದೇಶ, ಗ್ರಾಮೀಣ ಪರಿಸರದ ಮೇಲಾಗುವ ದುಷ್ಪರಿಣಾಮಗಳು, ಜಾನಪದ ಸಂಸ್ಕೃತಿ ಹೀಗೆ ವಿವಿಧ ಅಧ್ಯಾಯಗಳ ಮೂಲಕ ಜಾಗತೀಕರಣದ ದುಷ್ಪರಿಣಾಮಗಳನ್ನು ವೈಚಾರಿಕವಾಗಿ ವಿಶ್ಲೇಷಿಸಿದ್ದಾರೆ. ಜಾಗತೀಕರಣದ ವಿರುದ್ಧ ಹೋರಾಡುವ ಶಕ್ತಿ ಜಾನಪದ ಸಂಸ್ಕೃತಿಗೆ ಇದೆ ಎಂಬುದನ್ನು ಸೂಚಿಸುವ ವಿಚಾರಗಳನ್ನು ಇಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ರೈತರ ಕೈಯಲ್ಲಿ ಮೊಬೈಲ್ ಇದ್ದರೆ ಬಂಡವಾಳಶಾಹಿಗಳ ಕೈಯಲ್ಲಿ ಭೂಮಿ ಇರುತ್ತದೆ ಎಂಬ ಆಘಾತಕಾರಿ ಘೋಷಣೆಯನ್ನೂ ಲೇಖಕರು ಈ ಕೃತಿಯ ಮೂಲಕ ನೀಡಿದ್ದಾರೆ.

About the Author

ಚಿ.ಸಿ. ನಿಂಗಣ್ಣ

ಲೇಖಕ ಡಾ. ಸಿ. ಚಿ. ನಿಂಗಣ್ಣ ಅವರು ಮೂಲತಃ ಕಲಬುರಗಿಯವರು. ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪ್ರಥಮ ದರ್ಚೆಯಲ್ಲಿ ಪಡೆದರು. “ಕಲಬುರಗಿ ಜಿಲ್ಲೆಯ ಜಾತ್ರೆಗಳು ಒಂದು ಜಾನಪದೀಯ ಅಧ್ಯಯನ” ವಿಷಯವಾಗಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧ ಸಲ್ಲಿಸಿ, ಪಿಎಚ್ ಡಿ ಪಡೆದರು. ಸದ್ಯ, ಕಲಬುರಗಿಯ  ಸಂತ ಜೋಸೆಫ್ ಪಿ.ಯು. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರು. ಕ.ಸಾ.ಪ. ಸಾಹಿತ್ಯ ಸಂಚಾಲಕರಾಗಿದ್ದು, ವಚನಸಾಹಿತ್ಯ, ಜಾನಪದ ಹಾಗೂ ವಿಮರ್ಶೆ ವಲಯದಲ್ಲಿ ವಿಶೇಷ ಆಸಕ್ತಿ. ಕೃತಿಗಳು: ಕಲಬುರಗಿ ಜಿಲ್ಲೆಯ ಜಾತ್ರೆಗಳು ಒಂದು ಜಾನಪದೀಯ ಅಧ್ಯಯನ (ಮಹಾಪ್ರಬಂಧ) ಕನ್ನಡ ವ್ಯಾಕರಣ, ಬಡವರ ಬಂಗಾರ, ಶಿವಾಜಿ, ಹಬ್ಬಗಳು, ಸ್ಪಂದನ, ಬಸವಣ್ಣನವರ ವಚನಗಳಲ್ಲಿ ಸಮಾಜೋಧಾರ್ಮಿಕ ಪ್ರಜ್ಞೆ ...

READ MORE

Related Books