ಜಲಶಾಸ್ತ್ರದ ಹಸ್ತಪ್ರತಿಗಳು ಮತ್ತು ದೇಸಿ ವಿವೇಕ

Author : ವೀರೇಶ ಬಡಿಗೇರ

Pages 96

₹ 80.00




Year of Publication: 2015
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ, ಹಂಪಿ-583 276

Synopsys

ಭೂಮಿ, ನೀರು ಸೇರಿದಂತೆ ಪಂಚಭೂತಗಳ ಮೇಲೆ ಹಕ್ಕು ಸಾಧಿಸುತ್ತಿರುವ ಆಧುನಿಕ ಮನುಷ್ಯನ ಮನಸ್ಸಿನ ವಿಕಾರಗಳಿಗೆ ವಿರುದ್ಧವಾಗಿ ಜಲಶಾಸ್ತ್ರದ ಹಸ್ತಪ್ರತಿಗಳು ಮಂಡಿಸುವ ನೈತಿಕ ಪ್ರಜ್ಞೆಯು ದೇಸಿ ವಿವೇಕದ ಪ್ರತೀಕವಾಗಿದೆ. ಕೆರೆ, ಕುಂಟೆ, ಬಾವಿಗಳ ಸಂರಕ್ಷಣೆಯ ಅಗತ್ಯವನ್ನು ಈ ದೇಸಿ ವಿವೇಕ ಪ್ರತಿಪಾದಿಸುತ್ತದೆ. ಜಲಮೂಲಗಳ ನಾಶವು ಜೀವ ಜಗತ್ತಿನ ವಿನಾಶಕ್ಕೆ ಕಾರಣವಾಗುತ್ತದೆ. ಯಾವುದನ್ನು ಕೃಷಿ ಸಮಾಜವು ನೆಮ್ಮದಿಯ ಜೀವನಕ್ಕೆ ಕಾರಣ ಎಂದು ಹೇಳಿತ್ತೋ, ಅವೆಲ್ಲವೂ ವಿನಾಶದ ಅಂಚಿನಲ್ಲಿವೆ. ಇಂತಹ ಸ್ಥಿತಿಯಲ್ಲಿ ಜಲ ಶಾಸ್ತ್ರದ ಹಸ್ತಪ್ರತಿಗಳು ಹಾಗೂ ದೇಸಿ ವಿವೇಕ’ ಕೃತಿಯು ಮಹತ್ವದ ಒಳನೋಟಗಳನ್ನು ನೀಡುತ್ತದೆ.

About the Author

ವೀರೇಶ ಬಡಿಗೇರ
(04 April 1966)

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಹಸ್ತಪ್ರತಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವೀರೇಶ ಬಡಿಗೇರ, ಕನ್ನಡದ ಹಸ್ತಪ್ರತಿ ತಜ್ಞರಲ್ಲಿ ಒಬ್ಬರು. 1966 ಏಪ್ರಿಲ್‌ 4 ರಂದು ಜನಿಸಿದರು. ಎಂ. ಎ., ಪಿಎಚ್.ಡಿ. ಹಾಗೂ ಬಿ.ಇಡ್, ಡಿಪ್ಲೊಮಾ ಇನ್ ಎಪಿಗ್ರಾಫಿ ಮಾಡಿದ್ದು, ಕನ್ನಡ ಸಾಹಿತ್ಯ, ಸಂಸ್ಕೃತಿ, ಜಾನಪದ, ಸಂಗೀತ, ತಂತ್ರಜ್ಞಾನ ಆಸಕ್ತಿ ಕ್ಷೇತ್ರಗಳು. 28 ವರ್ಷ ಕಾಲ ಬೋಧನೆ ಹಾಗೂ ಸಂಶೋಧನೆಯ ಅನುಭವ ಇದೆ. ಬಾಗಲಕೋಟೆಯ  ಪಿ. ಎಂ. ನಾಡಗೌಡಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ  ಅರೆಕಾಲಿಕ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದರು. 1992 ರಿಂದ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂಶೋಧನ ಸಹಾಯಕರಾಗಿ ಕೆಲಸಕ್ಕೆ ಸೇರಿದರು. 1996 ಆಗಸ್ಟನಿಂದ ಹಸ್ತಪ್ರತಿಶಾಸ್ತ್ರ ವಿಭಾಗದಲ್ಲಿಉಪನ್ಯಾಸಕರಾದರು. 1996ರಲ್ಲಿ ಉತ್ತರ ಕರ್ನಾಟಕದ ಜಾನಪದ ...

READ MORE

Related Books