ಜಮಲಾಪುರದ ಜಡೆಮುನಿ ಕೇಸು

Author : ಕೌಶಿಕ್ ಕೂಡುರಸ್ತೆ

Pages 266

₹ 275.00




Year of Publication: 2025
Published by: ಸ್ನೇಹ ಬುಕ್ ಹೌಸ್
Address: 165, 10ನೇ ಮುಖ್ಯರಸ್ತೆ, ಶ್ರೀನಗರ, ಬೆಂಗಳೂರು - 560050
Phone: 9845031335

Synopsys

‘ಜಮಲಾಪುರದ ಜಡೆಮುನಿ ಕೇಸು’ ಕೌಶಿಕ್ ಕೂಡುರಸ್ತೆ ಅವರ ಪತ್ತೆದಾರಿ ಕಾದಂಬರಿಯಾಗಿದೆ. ಆತ್ಮೀಯ ಎಂಬ ಸತ್ಯಘಟನೆಯಾಧಾರಿತ ಕಾದಂಬರಿಯ ಮೂಲಕ ಕನ್ನಡ ಸಾಹಿತ್ಯ ಲೋಕದ ಕದ ತಟ್ಟಿದ ಕೌಶಿಕ್ ಅವರ ಪತ್ತೆದಾರಿ ನಿರೂಪಣಾ ಶೈಲಿಯೇ ವಿಭಿನ್ನ ಮತ್ತು ಆಹ್ಲಾದಕರ. ರಾತ್ರಿ ಹೊತ್ತು ಕಾಡಲ್ಲಿ ಓಡಾಡೋ ಜಡೆಮುನಿಯೆಂಬ ಪಿಶಾಚಿಯನ್ನು ಆಧಾರವಾಗಿಟ್ಟುಕೊಂಡು ಅದರ ಸುತ್ತ ಹಣೆದಿರುವ ಪತ್ತೇದಾರಿ ಕಾದಂಬರಿ ಇದಾಗಿದೆ. 

About the Author

ಕೌಶಿಕ್ ಕೂಡುರಸ್ತೆ

ವೃತ್ತಿಯಿಂದ ಸಹಾಯಕ ನಿರ್ದೇಶಕರಾಗಿರುವ ಕೌಶಿಕ್ ಕೂಡುರಸ್ತೆ ಅವರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕೂಡುರಸ್ತೆ ಗ್ರಾಮದವರು. ತಂದೆ-ಹೆಚ್.ಎಸ್. ತಮ್ಮೇಗೌಡ, ತಾಯಿ ಭಾಗ್ಯ ಆಚಾರ್ಯ ಇನ್ಸ್ಟಿಟ್ಯೂಟಿನಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಹೃದಯದ ಮಾತು’ ಇವರ ಮೊದಲ ಪ್ರಕಟಿತ ಕವನ ಸಂಕಲನ. ‘ಇಂತಿ ನಿಮ್ಮ ಆತ್ಮೀಯ’ ಎಂಬ ಕಾದಂಬರಿಯು ಇವರ ಎರಡನೆಯ ಪ್ರಕಟಿತ ಕೃತಿಯಾಗಿದ್ದು ಎರಡನೇ ಮುದ್ರಣವನ್ನು ಕಂಡಿದೆ. ಈ ಕಾದಂಬರಿಯು ‘ಬಹ್ರೇನ್ ಕನ್ನಡ ಡಿಂಡಿಮ’ ಸಮಾರಂಭದಲ್ಲಿ ಪ್ರದರ್ಶನಗೊಂಡಿದೆ. ಗ್ರಿಫಿನ್ಸ್ ಗುರುಕುಲ ಎಂಬ ಸಂಸ್ಥೆಗೆ ಬಿಸಿನೆಸ್ ಕುರಿತಾದ ‘ಬಿಸಿನೆಸ್ ಮತ್ತು ...

READ MORE

Related Books