ಜನಪದ ಜಗುಲಿ

Author : ವೆಂಕೋಬರಾವ್ ಎಂ.ಹೊಸಕೋಟೆ

Pages 148

₹ 120.00




Year of Publication: 2015
Published by: ನೇಕಾರ ಪ್ರಕಾಶನ
Address: ನೇಕಾರ ಪ್ರಕಾಶನ, ಗುರುಮಂದಿರ ರಸ್ತೆ, ಸೊರಬ-577429 ಶಿವಮೊಗ್ಗ ಜಿಲ್ಲೆ.
Phone: 9141833556

Synopsys

ಆಧುನಿಕ ಜಗತ್ತಿಗೆ ತೆರೆದುಕೊಳ್ಳುವ ತವಕದಲ್ಲಿ ಹಳೆತಲೆಮಾರಿನ ಚಿಂತನೆಗಳನ್ನು ದೂರಸರಿಸಲಾಗುತ್ತಿದೆ. ಏನೇ ಆದರೂ ಊರು ಕಟ್ಟಿದವರು ನಮ್ಮ ಜನಪದರು ಎಂದು ಹೆಮ್ಮೆಯಿಂದ ಹೇಳಿಕೊಳ್ಳಲೇಬೇಕು. ಜನಪದ ಆರಾಧನಾ ಕಲೆಗಳು, ಪ್ರದರ್ಶನ ಕಲೆಗಳು, ವೃತ್ತಿ ನಿರತ ಕಲೆಗಳು ತಮ್ಮ ಮಹತ್ವವನ್ನು ಕಳೆದುಕೊಳ್ಳುತ್ತಿರುವ ಸಂಕ್ರಮಣ ದಿನದಲ್ಲಿಯೂ ಜನಪದ ಸಂವೇದನೆಯುಳ್ಳ ಅನೇಕ ವಿದ್ವಾಂಸರು ಅದರ ಮಹತ್ವ ತಿಳಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ.

ಲೇಖಕರಾದ ಡಾ.ವೆಂಕೋಬರಾವ್ ಎಂ. ಹೊಸಕೋಟೆ ಯವರು ಜನಪದ ಸಾಹಿತ್ಯದ ಮಹತ್ವವನ್ನು ಅರಿತವರಾಗಿದ್ದು ತಮ್ಮ ಬರವಣಿಗೆಯ ಮೂಲಕ ಜನಪದ ಉಳಿಸುವ ಚಳುವಳಿ ಕೈಗೊಂಡಿದ್ದಾರೆ. ಈ ಪುಸ್ತಕ ಜನಪದ ಸಾಹಿತ್ಯದ ವಿವಿಧ ಮಜಲುಗಳನ್ನು ಅನಾವರಣಗೊಳಿಸುತ್ತದೆ. 

About the Author

ವೆಂಕೋಬರಾವ್ ಎಂ.ಹೊಸಕೋಟೆ

ಲೇಖಕ ಡಾ.ವೆಂಕೋಬರಾವ್ ಎಂ.ಹೊಸಕೋಟೆ ಅವರು ಕನ್ನಡದಲ್ಲಿ ಎಂ.ಎ, ತತ್ವಶಾಸ್ತ್ರದಲ್ಲಿ ಎಂ.ಎ, ಎಂ.ಎಡ್. ಎಂ.ಫಿಲ್ ಶಿಕ್ಷಣ ಸೇರಿದಂತೆ ಕನ್ನಡ ಸಾಹಿತ್ಯದಲ್ಲಿ ಪಿಎಚ್.ಡಿಯನ್ನು ಪಡೆದಿದ್ದಾರೆ. ಸದ್ಯ  ರಾಜಾಜಿನಗರದ ಎಂ.ಇ.ಎಸ್. ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.  ತಂದೆ- ಮುನಿದೇವರಾವ್ ಸಿ, ತಾಯಿ- ಅನುಸೂಯಬಾಯಿ ಎ. ವೃತ್ತಿಯೊಂದಿಗೆ ಸಾಹಿತ್ಯಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿರುವ ಅವರು ತಲ್ಲಣ, ಒಡಲು, ಮತ್ತೆ ಆಮೇಲೆ ಇನ್ನೇನೂ, ಲಾಕ್ ಡೌನ್ ಋತುಮಾನ, ದಯವಿಟ್ಟು ನಂತರ ಪ್ರಯತ್ನಿಸಿ ಎಂಬ ಕಾದಂಬರಿಗಳು. ಮಿಂಚುಳ್ಳಿ, ಬೆಸುಗೆ, ಕಾಣದ ಕಡಲು, ಆಕಾಶದ ನೀಲಿಯಲ್ಲಿ, ಪ್ರೀತಿ ನೀನಿಲ್ಲದ ಮೇಲೆ ಎಂಬ ಕವನ ಸಂಕಲನಗಳು. ಅಂಚು, ಕಪ್ಪುನೆಲ, ಅಸ್ಮಿತೆಯ ...

READ MORE

Related Books