ಜನಪದ ಸಾಹಿತ್ಯದಲ್ಲಿ ತವರುಮನೆ

Author : ಮುಮ್ತಾಜ್ ಬೇಗಂ, ಗಂಗಾವತಿ

Pages 146

₹ 190.00




Year of Publication: 2019
Published by: ಗಾಯತ್ರಿ ಪ್ರಕಾಶನ
Address: #193, ಚರ್ಚ್‌ ಹೌಸ್‌ ಹತ್ತಿರ, ಬಂಡಿಹಟ್ಟಿ, ಚೌಲ್‌ ಬಜಾರ್‌, ಬಳ್ಳಾರಿ
Phone: 9880254405

Synopsys

ಸಾಹಿತ್ಯದ ತಾಯಿ ಬೇರು ಜನಪದ ಸಾಹಿತ್ಯ. ಪ್ರಸ್ತುತ ಜನಪದ ಸಾಹಿತ್ಯದಲ್ಲಿ ತವರುಮನೆ ಕೃತಿಯಲ್ಲಿ ಮುಮ್ತಾಜ್‌ ಬೇಗಂ ಅವರು ಜನಪದ ಸಾಹಿತ್ಯದಲ್ಲಿ ಸಾಮಾಜಿಕ ಚಿತ್ರಗಳು ಮತ್ತು ಸಾಂಸ್ಕೃತಿಕ ಮೌಲ್ಯಗಳು ಗತಕಾಲದ ಸಂಗತಿಗಳಾದರೂ ಇಂದಿನ ವರ್ತಮಾನಕ್ಕೆ ಮುಖಾಮುಖಿಯಾಗಿಸುವ ಪ್ರಯತ್ನವನ್ನು ಮಾಡಿದ್ದಾರೆ. ಜನಪದ ಸಾಹಿತ್ಯದಲ್ಲಿ ಹೆಣ್ಣುಮಗಳು ತನ್ನ ಬದುಕಿನ ಜೀವನ ಅನುಭವನಗಳನ್ನು ಕಟ್ಟಿಕೊಡುವ ಪ್ರಯತ್ನವನ್ನು ಮಾಡಿದ್ದಾಳೆ. ಪುರುಷ ಪ್ರಧಾನ ವ್ಯವಸ್ಥೆಯ ವಾಹಕರಾದ ಪುರಾಣಕಾರರು, ಕೀರ್ತನಕಾರರು, ಕತೆ, ಉಪಕತೆಗಳ ಮೂಲಕ ಹೆಣ್ಣನ್ನು ಕೀಳಾಗಿ ಚಿತ್ರಿಸುವ ಮೂಲಕ ತಾಯ್ತನವನ್ನು ವೈಭವಿಕರಿಸಿದ್ದಾರೆ. ಇಂತಹ ಹಲವಾರು ವಿಷಯಗಳ ಬಗ್ಗೆ ವಿಶ್ಲೇಷಣೆಯನ್ನು ಈ ಕೃತಿಯಲ್ಲಿ ಮಾಡಲಾಗಿದೆ.

About the Author

ಮುಮ್ತಾಜ್ ಬೇಗಂ, ಗಂಗಾವತಿ

ಡಾ. ಮಮ್ತಾಜ್ ಬೇಗಂ ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿಯವರು. ತಂದೆ ಹುಸೇನಸಾಬ, ತಾಯಿ ಕಾಸಿಂಬಿ ಮುಧೋಳ. ಗಂಗಾವತಿಯಲ್ಲೇ ಪದವಿವರೆಗೂ ಶಿಕ್ಷಣ ಪೂರ್ಣಗೊಳಿಸಿ, ಗುಲಬಗಾ ವಿ.ವಿ.ಯಿಂದ ಎಂ.ಎ ಹಾಗೂ 'ಪಿಂಜಾರರು: ಒಂದು ಜಾನಪದೀಯ ಅಧ್ಯಯನ' ವಿಷಯವಾಗಿ ಮಹಾಪ್ರಬಂಧ ಸಲ್ಲಿಸಿ ಪಿಎಚ್ ಡಿ ಪಡೆದರು. ಸದ್ಯ, ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದಲ್ಲಿಸಹಾಯಕ ಪ್ರಾಧ್ಯಾಪಕಿಯಾಗಿದ್ದಾರೆ.  ಕಾವ್ಯ, ಸಂಶೋಧನೆ, ಜಾನಪದ, ವಚನ, ದಲಿತ ಸಾಹಿತ್ಯ, ಸ್ತ್ರೀವಾದಿ ಚಿಂತನೆಗಳ ಬರವಣಿಗೆ ಇವರ ಆಸಕ್ತಿಯ ಕ್ಷೇತ್ರಗಳು. ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಠ್ಯಪುಸ್ತಕ ಸಮಿತಿಯ ಸದಸ್ಯರಾಗಿ, ಕನ್ನಡ ವಿಶ್ವವಿದ್ಯಾಲಯ ದೂರಶಿಕ್ಷಣ ಪಠ್ಯಪುಸ್ತಕ ಸಮಿತಿಯ ಸದಸ್ಯರಾದ್ಗಿದಾರೆ. ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ...

READ MORE

Related Books