ಜೀವ ನಾದ

Author : ಕೃಷ್ಣಮೂರ್ತಿ ಪುರಾಣಿಕ

Pages 90

₹ 1.00




Year of Publication: 1956
Published by: ಸುದರ್ಶನ ಪ್ರಕಾಶನ
Address: ತಾರಾ ನಿವಾಸ, ತಿಪಟೂರು

Synopsys

ಲೇಖಕ ಕೃಷ್ಣಮೂರ್ತಿ ಪುರಾಣಿಕರು ಬರೆದ ಕವನ ಸಂಕಲನ -ಜೀವ ನಾದ. ಇಲ್ಲಿಯ ಬಹುತೇಕ ಕವನಗಳು ಪ್ರಬುದ್ಧ ಕರ್ಣಾಟಕ, ಜಯಂತಿ, ಕರ್ಮವೀರ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಕನ್ನಡ ನಾಡು-ನುಡಿ-ಜಲ-ಕನ್ನಡ ಸಂಸ್ಕೃತಿ-ಸಂಸ್ಕಾರ, ಹರೆಯದ ಮೈಮನಗಳ ಪುಳಕ, ಕನ್ನಡ ತಾಯಿಯ ಹಿರಿಯ ಸಾಹಿತಿಗಳ ನೆನಹು-ಹೀಗೆ ಜೀವ ನಾದ ತುಂಬಾ ಸುಮಾರು 31 ಕವನಗಳ ನಿನಾದವಿದೆ.

About the Author

ಕೃಷ್ಣಮೂರ್ತಿ ಪುರಾಣಿಕ
(05 September 1911 - 09 November 1985)

ಅಗ್ರಶ್ರೇಣಿಯ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕರು ಹುಟ್ಟಿದ್ದು ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ.1911 ಸೆಪ್ಟಂಬರ್ 5ರಂದು. 1933ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಪುರಾಣಿಕರು 1946ರಲ್ಲಿ 'ರಾಮೂನ ಕಥೆಗಳು' ಪ್ರಕಟಿಸಿದರು. ಅವರ 'ಧರ್ಮದೇವತೆ' ಕಾದಂಬರಿ 'ಕರುಣೆಯೇ ಕುಟುಂಬದ ಕಣ್ಣು' ಎಂಬ ಚಲನಚಿತ್ರವಾಗಿದೆ. ಪುರಾಣಿಕರ 11 ಕೃತಿಗಳು  ಬೆಳ್ಳೆತೆರೆ ಕಂಡಿವೆ.  'ಸನಾದಿ ಅಪ್ಪಣ್ಣ' ಕನ್ನಡಿಗರೆಂದೂ ಮರೆಯದ ಕೃತಿ. ಮೊದಲ ಪ್ರಕಟಿತ ಗದ್ಯ ಕೃತಿ, 'ರಾಮೂನ ಕಥೆಗಳು'. ಮೊದಲ ಕವನ ಸಂಕಲನ 'ಬಾಳ ಕನಸು'. ಮೊದಲ ಕಾದಂಬರಿ 'ಮುಗಿಲಮಲ್ಲಿಗೆ'. 'ಮೌನಗೌರಿ', 'ಮುತ್ತೈದೆ', `ಮನೆ ತುಂಬಿದ ಹೆಣ್ಣು', 'ಮಣ್ಣಿನ ಮಗಳು', 'ಕುಲವಧು', 'ಮನಸೋತ ಮನದನ್ನೆ', 'ಧರ್ಮ ...

READ MORE

Related Books