ಜೀವನ ಯಾತ್ರೆ

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 138

₹ 1.00




Year of Publication: 1946
Published by: ಮಾಧವ ಸನ್ಸ್
Address: ಬೆಂಗಳೂರು

Synopsys

ಕಾದಂಬರಿಕಾರ ಅ.ನ.ಕೃಷ್ಣರಾಯರು ಬರೆದ ಕಾದಂಬರಿ-ಜೀವನ ಯಾತ್ರೆ. 1934ರಲ್ಲಿ ಈ ಕೃತಿಯು ಮೊದಲ ಮುದ್ರಣ ಕಂಡಿತ್ತು. ರೂಢಮೂಲವಾದ ನೀತಿ ಕಲ್ಪನೆಗೆ ಈ ಕಾದಂಬರಿಯ ವಸ್ತು ಬಲವಾದ ಪೆಟ್ಟು ನೀಡಿತ್ತು. ಸಮಾಜ ದೇಹವನ್ನು ಕೊರೆಯುತ್ತಿರುವ ಅನೀತಿ ಕೀಟವನ್ನು ನಿವಾರಿಸಲು ಹೊರಟ ಕಾದಂಬರಿ ಇದು. ವ್ಯಭಿಚಾರ, ರೋಗ , ದಾಸ್ಯ ಇಂತಹ ಅನಿಷ್ಟಗಳ ಹಿಂದೆ ಹಸಿವು ಹೆಬ್ಬಾವಿನಂತೆ ಬಾಯ್ದೆರೆದು ಕುಳಿತಿದೆ ಎಂಬುದನ್ನು ಈ ಕಾದಂಬರಿ ತೋರುತ್ತದೆ ಎಂಬುದಾಗಿ ಲೇಖಕರು ಸಮರ್ಥಿಸಿಕೊಂಡಿದ್ದಾರೆ.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books