ಜೆಪಿ ಕೈಪಿಡಿ

Author : ಡಿ.ಎಸ್.ನಾಗಭೂಷಣ

Pages 54

₹ 25.00




Year of Publication: 2012
Published by: ಗೀತಾಂಜಲಿ ಪುಸ್ತಕ ಪ್ರಕಾಶನ
Address: ಕಂದಾಯ ಭವನ, ನೂರಡಿ ರಸ್ತೆ, ರಾಜೇಂದ್ರ ನಗರ ಶಿವಮೊಗ್ಗ- 577201
Phone: 9449886390

Synopsys

ಜಯಪ್ರಕಾಶ ನಾರಾಯಣ ಅವರ ವಿಚಾರಧಾರೆಯನ್ನು ಪರಿಚಯಿಸುವ ಕೃತಿ ಇದು. ಡಿ.ಎಸ್. ನಾಗಭೂಷಣ ಅವರ ಕೃತಿ ಇದಾಗಿದೆ. ಈ ಕಿರು ಪುಸ್ತಕ  ಜೆಪಿ ಸಮಗ್ರ ವಿಚಾರಧಾರೆಯನ್ನು ಪರಿಚಯಮಾಡಿಕೊಳ್ಳಲು  ಪ್ರೇರೇಪಿಸುವ ಪ್ರಯತ್ನ. ಇಲ್ಲಿನ ಕೆಲವು ಉಲ್ಲೇಖಗಳನ್ನು ಅರ್ಥ ಮಾಡಿಕೊಳ್ಳಲು ಸ್ವಲ್ಪ ರಾಜಕೀಯ ತತ್ವಶಾಸ್ತ್ರ ಪರಿಚಯದ ಅಗತ್ಯವಿದೆ ಎಂದು ಲೇಖಕರು ತಿಳಿಸಿದ್ದಾರೆ.

About the Author

ಡಿ.ಎಸ್.ನಾಗಭೂಷಣ
(01 February 1952 - 19 May 2022)

ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ ಅವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ1975ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು. ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ...

READ MORE

Related Books