ಕರ್ನಾಟಕ ರಂಗಭೂಮಿ-ವೃಕ್ಷಕ್ಕೆ ಟಿಸಿಲೊಡೆದ ತುಳು ರಂಗಭೂಮಿಯ ಹೂ ಕಾಯಿ ಹಣ್ಣು ಎಲ್ಲ ಆಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಸಮಸ್ಯೆಗಳನ್ನು ಸಾಮಾಜಿಕ ರಂಗಕ್ಕೆ ತಂದ ಕೆ.ಎನ್. ಟೇಲರ್ ಎಂದೇ ಪ್ರಸಿದ್ದರಾಗಿರುವವರು ಕಡಂದೆಲೆ ನಾರಾಯಣ. ಅಂಗಡಿ ಇಟ್ಟುಕೊಂಡು ಬಟ್ಟೆ ಹೊಲಿಯುವ ವೃತ್ತಿಯನ್ನೂ ಮಾಡಿದರು. ಇವರ ಬದುಕಿನ ಚಿತ್ರಣವನ್ನು ಈ ಕೃತಿ ಕಟ್ಟಿ ಕೊಡುತ್ತದೆ.
ನಾದಾ ಎಂತಲೂ ಕರೆಯಲಾಗುವ ನಾ. ದಾಮೋದರ ಶೆಟ್ಟಿ ಅವರು 1951 ಆಗಸ್ಟ್ 2ರಂದು ಕಾಸರಗೋಡಿನ ಕುಂಬಳೆಯಲ್ಲಿ ಜನಿಸಿದರು. ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಸುಳುವಿನೊಳಗೆ, ಸರದಿ (ಕಾದಂಬರಿ), ಕೆ.ಎನ್. ಟೇಲರ್, ಮುದ್ದಣ ಬದುಕು-ಬರಹ, ನಾರಾಯಣಗುರು, ಪೇಜಾವರ ಸದಾಶಿವರಾಯರು, ಕೆ.ವಿ. ಸುಬ್ಬಣ್ಣ (ವ್ಯಕ್ತಿ ಪರಿಚಯ), ಭತ್ತದ ಕಾಳುಗಳು, ಕರಿಯ ದೇವರ ಹುಡುಕಿ, ಅಶ್ವತ್ಥಾಮ, ಬಾಲ್ಯದ ನೆನಪುಗಳು, ದೇವರ ವಿಕರಾಳಗಳು, ಸಾಕ್ಷಾತ್ಕಾರ, ಮಹಾಕವಿ ಜಿ. ಶಂಕರ ಕುರುಪ್, ಭರತವಾಕ್ಯ (ಅನುವಾದ), ಅದ್ಭುತ ರಾಮಾಯಣ, ಸ್ವಾತಂತ್ರದ ಸ್ವರ್ಣಹೆಜ್ಜೆ, ಸಾನ್ನಿಧ್ಯ, ಪೋಲಿ, ...
READ MORE