ಕೆ.ವಿ. ಸುಬ್ಬಣ್ಣ

Author : ನಾ. ದಾಮೋದರ ಶೆಟ್ಟಿ

Pages 96

₹ 60.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌ (ಪ್ರೈ.) ಲಿ. ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: (080-22203580/01/02)

Synopsys

ಹೆಗ್ಗೋಡಿನಂತಹ ಸಣ್ಣ ಹಳ್ಳಿಯನ್ನು ವಿಶ್ವವೇ ನಿಬ್ಬೆರಗಾಗುವಂತೆ ಮಾಡಿದವರು ಕೆ.ವಿ. ಸುಬ್ಬಣ್ಣ. ಅವರ ನೀಲಕಂಠ ನಾಟ್ಯಸಂಘ ಭಾರತೀಯ ರಂಗಭೂಮಿಯ ಪ್ರಮುಖ ಮೈಲುಗಲ್ಲು. ಸುಬ್ಬಣ್ಣನವರ ಆಸಕ್ತಿಯ ಕ್ಷೇತ್ರಗಳು ಹಲವು.

’ಗಾರ್ಗಿಯ ಕಥೆಗಳು’ ’ರಾಜಕೀಯದ ಮಧ್ಯೆ ಬಿಡುವು’, ’ಅಭಿಜ್ಞಾನ ಶಾಕುಂತಲ’, ’ಸೂಳೆ ಸನ್ಯಾಸಿ’ ಇವು ಸುಬ್ಬಣ್ಣನವರ  ಪ್ರಮುಖ ನಾಟಕಗಳು. ’ಅರೆ ಶತಮಾನದ ಅಲೆ ಬರಹಗಳು’ ಅವರ ಚಿಂತನ ಕೃತಿ.  ’ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು’ ಸಾಹಿತ್ಯಿಕ ಗ್ರಂಥ.

 ಫಿಲಿಪ್ಪೀನ್‌ ಸರ್ಕಾರದ ರಮೊನ್ ಮ್ಯಾಗ್ಸೆಸ್ಸೆ ಪುರಸ್ಕಾರ,’ಕಾಳಿದಾಸ್‌ ಸಮ್ಮಾನ್‌’ ಕೇಂದ್ರ ಸರ್ಕಾರದ ಪದ್ಮಶ್ರೀ ಪುರಸ್ಕಾರಕ್ಕೆ ಪಾತ್ರರಾದ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಮತ್ತೊಂದು ಕೊಡುಗೆ ಅಕ್ಷರ ಪ್ರಕಾಶನ. ತಮ್ಮ ಪ್ರಕಾಶನದ ಮೂಲಕ ೫೦೦ಕ್ಕೂ ಹೆಚ್ಚು ವಿಶಿಷ್ಟ ಕೃತಿಗಳನ್ನು ಅವರು ಪ್ರಕಟಿಸಿದ್ದಾರೆ.’ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ದೊರೆತಿದೆ. 

ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರ ಮಾಲಿಕೆಗಾಗಿ ಸುಬ್ಬಣ್ಣವರ ಜೀವನ ಚಿತ್ರಣ ಒದಗಿಸಿದ್ದಾರೆ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ. 

About the Author

ನಾ. ದಾಮೋದರ ಶೆಟ್ಟಿ
(02 August 1951)

ನಾದಾ ಎಂತಲೂ ಕರೆಯಲಾಗುವ ನಾ. ದಾಮೋದರ ಶೆಟ್ಟಿ ಅವರು 1951 ಆಗಸ್ಟ್‌ 2ರಂದು ಕಾಸರಗೋಡಿನ ಕುಂಬಳೆಯಲ್ಲಿ ಜನಿಸಿದರು. ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಸುಳುವಿನೊಳಗೆ, ಸರದಿ (ಕಾದಂಬರಿ), ಕೆ.ಎನ್. ಟೇಲರ್‌, ಮುದ್ದಣ ಬದುಕು-ಬರಹ, ನಾರಾಯಣಗುರು, ಪೇಜಾವರ ಸದಾಶಿವರಾಯರು, ಕೆ.ವಿ. ಸುಬ್ಬಣ್ಣ (ವ್ಯಕ್ತಿ ಪರಿಚಯ), ಭತ್ತದ ಕಾಳುಗಳು, ಕರಿಯ ದೇವರ ಹುಡುಕಿ, ಅಶ್ವತ್ಥಾಮ, ಬಾಲ್ಯದ ನೆನಪುಗಳು, ದೇವರ ವಿಕರಾಳಗಳು, ಸಾಕ್ಷಾತ್ಕಾರ, ಮಹಾಕವಿ ಜಿ. ಶಂಕರ ಕುರುಪ್, ಭರತವಾಕ್ಯ (ಅನುವಾದ), ಅದ್ಭುತ ರಾಮಾಯಣ, ಸ್ವಾತಂತ್ರದ ಸ್ವರ್ಣಹೆಜ್ಜೆ, ಸಾನ್ನಿಧ್ಯ, ಪೋಲಿ, ...

READ MORE

Related Books