ಕಾಡಿನ ಕತ್ತಲಲ್ಲಿ

Author : ಜಿ.ಎಸ್. ಶಿವರುದ್ರಪ್ಪ

Pages 60

₹ 36.00

Buy Now


Year of Publication: 2013
Published by: ಸಾಹಿತ್ಯ ಭಂಡಾರ
Address: ಜಂಗಮ ಮೇಸ್ತ್ರಿಗಲ್ಲಿ, ಬಳೇಪೇಟೆ, ಬೆಂಗಳೂರು-560053

Synopsys

ಕವಿ ಜಿ.ಎಸ್. ಶಿವರುದ್ರಪ್ಪನವರ ಕವನ ಸಂಕಲನ-ಕಾಡಿನ ಕತ್ತಲಲ್ಲಿ. ಈ ಕವನ ಸಂಕಲನದ ಒಂದು ಕವಿತೆ ಹೀಗಿದೆ; ‘ನಾನು ಬರೆಯುತ್ತೇನೆ, ಸುಮ್ಮನಿರಲಾರದ್ದಕ್ಕೆ, ನನ್ನ ವೇದನೆ ಸಂವೇದನೆಗಳನ್ನು, ಕ್ರಿಯೆ ಪ್ರತಿಕ್ರಿಯೆಗಳನ್ನು, ದಾಖಲು ಮಾಡುವುದಕ್ಕೆ, ನಿಂತ ನೀರಾಗದೆ ಮುಂದಕ್ಕೆ ಹರಿಯುವುದಕ್ಕೆ’ ಹೀಗೆ ಸಹಜವಾದ ಮಾತೂ ಸಹ ತನ್ನ ಪ್ರಾಮಾಣಿಕ ಅಭಿವ್ಯಕ್ತಿಯೊಂದಿಗೆ ಕಾವ್ಯದ ಸ್ವರೂಪ ಪಡೆಯುವುದನ್ನು ಇಲ್ಲಿ ಕಾಣಬಹುದು. ಇಂತಹ ಕವನಗಳಿಂದ ಕೂಡಿದ ಸಂಕಲನವಿದು.

About the Author

ಜಿ.ಎಸ್. ಶಿವರುದ್ರಪ್ಪ
(07 February 1926 - 23 December 2013)

ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...

READ MORE

Related Books