ಕಾಲವಲ್ಲಿರಲಿಲ್ಲ ದೇಶವಲ್ಲಿರಲಿಲ್ಲ

Author : ಬಿ.ಎಸ್. ಜಯಪ್ರಕಾಶ ನಾರಾಯಣ

Pages 424

₹ 250.00




Year of Publication: 2017
Published by: ಆಕೃತಿ ಪುಸ್ತಕ
Address: ಆಕೃತಿ ಪುಸ್ತಕ, ರಾಜಾಜಿನಗರ, ಬೆಂಗಳೂರು

Synopsys

ಟಾಲ್‌ಸ್ಟಾಯ್‌ ತಮ್ಮ ಬದುಕಿನ ಅನುಭವದ ಮೂಲಕ ಕಂಡುಕೊಂಡ ಸತ್ಯಗಳು ಮತ್ತು ಜಗತ್ತಿನ ಶ್ರೇಷ್ಠ ದಾರ್ಶನಿಕರ ಮಾತುಗಳನ್ನು ಸೇರಿಸಿ ಈ ಪುಸ್ತಕವನ್ನು ರಚಿಸಿದ್ದಾರೆ. ವೈಯಕ್ತಿಕವಾಗಿಯೂ ಇದು ಅವರಿಗೆ ತುಂಬ ಸಂತೃಪ್ತಿ ನೀಡಿದ ಕೃತಿ. ಇದನ್ನು ಅವರೇ ಬರೆದುಕೊಂಡಿದ್ದಾರೆ. ಮುನ್ನೂರ ಅರವತ್ತೈದು ಸರಳ, ಅಷ್ಟೇ ಮಹತ್ವದ ಸಂಗತಿಗಳನ್ನು ಪುಟ್ಟಪುಟ್ಟದಾಗಿ ಈ ಕೃತಿಯಲ್ಲಿ ನೀಡಲಾಗಿದೆ. ಪ್ರತಿದಿನವೂ ಒಂದೊಂದು ಅಧ್ಯಾಯವನ್ನು ಓದಿಕೊಳ್ಳಲು ಅನುಕೂಲವಾಗುವಂತೆ ದಿನಾಂಕದ ಪ್ರಕಾರವೇ ಸಂ‌ಗ್ರಹಿಸಲಾಗಿದೆ.ಧರ್ಮಕ್ಕೆ ಸಂಬಂಧಿಸಿದಂತೆ ಟಾಲ್ ಸ್ವಾಯ್ ಹೇಳಿದ ಮಾತು ಹಿಂದಷ್ಟೇ ಅಲ್ಲ ಇಂದು ಮತ್ತು ನಾಳೆಗೂ ಅನ್ವಯ. ಇಂಥ ಮಿಂಚುಗಳು ಸಾಕಷ್ಟಿವೆ. ಅಂದಹಾಗೇ, ಒಂದು ವಿಷಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು ಹೇಗೆ ಎನ್ನುವ ಗೊಂದಲ ಎಲ್ಲರಲ್ಲೂ ಇರುತ್ತದೆ. ಈ ದಿಸೆಯಲ್ಲಿ ಟಾಲ್‌ಸ್ಟಾಯ್ ಗ್ರಹಿಕೆಗಳು ದಾರಿ ತೋರುತ್ತವೆ ಎಂದು ಬಿ.ಎಸ್.ಜಯಪ್ರಕಾಶ ನಾರಾಯಣರವರು “ಕಾಲವಲ್ಲಿರಲಿಲ್ಲ ದೇಶವಲ್ಲಿರಲಿಲ್ಲ’ ಕೃತಿಯಲ್ಲಿ ವಿವರಿಸಿದ್ದಾರೆ.

About the Author

ಬಿ.ಎಸ್. ಜಯಪ್ರಕಾಶ ನಾರಾಯಣ

ಪತ್ರಕರ್ತ ಬಿ.ಎಸ್. ಜಯಪ್ರಕಾಶ್‌ ನಾರಾಯಣ ಅವರು ಉತ್ತಮ ಅನುವಾದಕ ಕೂಡ. ಪ್ರಜಾವಾಣಿ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಉಪಸಂಪಾದಕ/ ವರದಿಗಾರರಾಗಿ ಕಾರ್ಯ ನಿರ್ವಹಿಸಿರುವ ಅವರು ಸದ್ಯ ಅನುವಾದದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಟಿ.ಜೆ.ಎಸ್‌. ಜಾರ್ಜ್‌ ಅವರ ಎಂ.ಎಸ್., ಯು.ಆರ್‌. ಅನಂತಮೂರ್ತಿ ಅವರ ’ನನ್ನ ಸಾಹಿತ್ಯದ ಐದು ದಶಕಗಳು’, ’ನಾನು ಮಲಾಲ’ ಕೃತಿಗಳನ್ನು ಅನುವಾದಿಸಿದ್ದಾರೆ. ಛಾಯಾಗ್ರಾಹಕ ಕೆ.ಜಿ. ಸೋಮಶೇಖರ ಅವರ ಆತ್ಮಕತೆ ’ನನ್ನ ಬದುಕು ನನ್ನ ಫೋಟೊಗ್ರಫಿ’ ಕೃತಿಯನ್ನು ನಿರೂಪಿಸಿದ್ದಾರೆ. ...

READ MORE

Related Books