ಕಾನನ ಜನಾರ್ದನ

Author : ಕೆ.ಎನ್. ಗಣೇಶಯ್ಯ

Pages 390

₹ 395.00




Year of Publication: 2022
Published by: ಅಂಕಿತ ಪುಸ್ತಕ
Address: 53, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು- 560004
Phone: 9019190502

Synopsys

‘ಕಾನನ ಜನಾರ್ದನ’ ಖ್ಯಾತ ಲೇಖಕ ಡಾ.ಕೆ.ಎನ್. ಗಣೇಶಯ್ಯ ಅವರ ಕಾದಂಬರಿ. ಮೇಘಾಲಯದ ಪರ್ವತಗಳ ಮೇಲೆ ಚರಿತ್ರೆಯ ವಿದ್ಯಾರ್ಥಿಗಳಿಗೆ ಶಿಲಾಯುಗದ ಮಾನವನ ಸಂಸ್ಕೃತಿಯ ಪಳೆಯುಳಿಕೆಯೊಂದನ್ನು ಪರಿಚಯಿಸುತ್ತಿದ್ದ ಪಲ್ಲವಿಗೆ ಬಂದ ಕರೆಯೊಂದು ಆಕೆಯನ್ನು ತಲ್ಲಣಗೊಳಿಸುತ್ತದೆ. ಅಮೆರಿಕದ ಕಂಪನಿಯೊಂದಿಗೆ ಕೈ ಜೋಡಿಸಿದ ಮುಂಬೈನ ಉದ್ಯಮಿಯೊಬ್ಬ ಭಾರತದ ಧಾರ್ಮಿಕ ಮತ್ತು ಸಂವಿಧಾನದ ನಿಲುವನ್ನೇ ಬದಲಾಯಿಸುವ ಷಡ್ಯಂತ್ರಕ್ಕೆ ಕೈ ಹಾಕುತ್ತಾನೆ. ಕನ್ನಡದ ಕಾದಂಬರಿಕಾರ ನಾಗಯ್ಯನವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯಿಂದಾಗಿ ಅವರು ಮೂರ್ಛಾಸ್ಥಿತಿ ತಲುಪುತ್ತಾರೆ. ಆ ಹಲ್ಲೆಯ ಹಿಂದಿನ ರಹಸ್ಯವು ಅವರು ಬರೆದ ಕಾದಂಬರಿಯಲ್ಲಿಯೇ ಅಡಗಿರಬಹುದು ಎಂಬ ಅನುಮಾನ ಮೂಡುತ್ತದೆ. ಆದರೆ ಮೂರು ಸಾವಿರ ವರ್ಷಗಳ ಹಿಂದಿನ ಮಾನವನ ಬಗೆಗಿನ ಆ ಕಾದಂಬರಿಯ ವಸ್ತುವಿಗೂ ಅವರ ಮೇಲೆ ನಡೆದ ಹಲ್ಲೆಗೂ ಯಾವ ರೀತಿಯ ಸಂಬಂಧ ಇರಲು ಸಾಧ್ಯ ?

ಶಿಲಾಯುಗದಲ್ಲಿ ದಕ್ಷಿಣ ಭಾರತದ ಕಾಡಿನ ಜನ ಪೂಜಿಸುತ್ತಿದ್ದ ಸ್ಥಾನಿಕ ದೈವಗಳ, ಅವರು ನಿರ್ಮಿಸುತ್ತಿದ್ದ ಶಿಲಾವ್ಯೂಹಗಳ ಸುತ್ತ ಹೆಣೆದ ಕಥಾಹಂದರಕ್ಕೂ, ವರ್ತಮಾನದಲ್ಲಿ ನಡೆಯುತ್ತಿರುವ ಜಾಗತಿಕ ಬೆಳವಣಿಗೆಗಳಿಗೂ ಯಾವ ರೀತಿಯ ನಂಟಿರಲು ಸಾಧ್ಯ, ಆ ನಂಟೇ ನಾಗಯ್ಯನವರ ಮೇಲಿನ ಹತ್ಯೆಯ ಪ್ರಯತ್ನಕ್ಕೆ ಕಾರಣವಾಯಿತೆ. ಇಂಥಹ ಹಲವು ಪ್ರಶ್ನೆಗಳ ಸುತ್ತ ಬೆಳೆದ ಈ ಚಾರಿತ್ರಿಕ ಕಾದಂಬರಿಯು ಮೂರು ಸಾವಿರ ವರ್ಷಗಳ ಹಿಂದೆ ದಕ್ಷಿಣ ಭಾರತದ ಕಾಡುಗಳಲ್ಲಿ ನೆಲೆಯಾಗಿದ್ದ ಶಿಲಾಯುಗದ ಮಾನವನ ಸಂಸ್ಕೃತಿ ಮತ್ತು ಧಾರ್ಮಿಕ ನಂಬಿಕೆಗಳ ವಿಕಾಸದ ಬಗ್ಗೆ ಒಂದು ಕಿರುನೋಟವನ್ನು ಕಟ್ಟಿಕೊಡುತ್ತದೆ. ಕನ್ನಡ ಕಾದಂಬರಿಯ ಲೋಕದಲ್ಲಿಯೇ ಒಂದು ಅನನ್ಯ ಪ್ರಯತ್ನ ‘ಕಾನನ ಜನಾರ್ದನ’

About the Author

ಕೆ.ಎನ್. ಗಣೇಶಯ್ಯ

ವೃತ್ತಿಯಿಂದ ಕೃಷಿ ವಿಜ್ಞಾನಿ ಆಗಿರುವ ಕೆ.ಎನ್. ಗಣೇಶಯ್ಯ ಅವರು ಮೂಲತಃ ಕೋಲಾರ ಜಿಲ್ಲೆಯವರು. ಕಳೆದ ೩೦ ವರ್ಷಗಳಿಂದ ತಳಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿರುವ ಅವರು  ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು. ಪ್ರಾಣಿ ಮತ್ತು ಸಸ್ಯಗಳ ವರ್ತನೆಗೆ ಮೂಲಭೂತವಾದ ಜೀವವಿಕಾಸದ ತತ್ವಗಳನ್ನು ಅನ್ವೇಷಿಸುವುದು ಇವರ ಮತ್ತೊಂದು ಸಂಶೋಧನಾಸಕ್ತಿ. ಭಾರತದ ಪ್ರಮುಖ ಜೀವ ವೈವಿಧ್ಯ ತಾಣಗಳಲ್ಲಿನ ಸಸ್ಯಗಳ ಮತ್ತು ದೇಶದ ಜೀವ ಸಂಪತ್ತಿನ ಬಗ್ಗೆ ಇವರು ತಯಾರಿಸಿರುವ ಮಾಹಿತಿಯ ಖಜಾನೆಯ ಸಿ.ಡಿ.ಗಳು ಮತ್ತು ಅಂತರ್ಜಾಲ ಒಂದು ಅಪೂರ್ವ ಹೆಜ್ಜೆ. ಇನ್ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧ ಬರೆದಿರುವ ಅವರು ಆರು ವೈಜ್ಞಾನಿಕ ಕೃತಿಗಳನ್ನು ...

READ MORE

Related Books