ಲೇಖಕಿ ಸಾರಾ ಅಬೂಬಕ್ಕರ್ ಅವರ ಕಾದಂಬರಿ-ಕಾಣಿಕೆ. ಪ್ರಗತಿಪರ ವಿಛಾರಧಾರೆಗಳನ್ನು ಮೈಗೂಡಿಸಿಕೊಂಡು ಸಾಹಿತ್ಯ ರಚನೆ ಮಾಡುತ್ತಿರುವ ಲೇಖಕಿ, ಕಾಣಿಕೆ ಕಾದಂಬರಿಯಲ್ಲೂ ಕಥೆಯ ವಸ್ತುವಿನ ದೃಷ್ಟಿಯಿಂದ ಹೊಸತನ ತಂದಿದ್ದಾರೆ. ನಿರೂಪಣಾ ಶೈಲಿಯೂ ಪ್ರಖರವಾಗಿದ್ದು, ಓದುಗರ ಗಮನ ಸೆಳೆಯುತ್ತದೆ. ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ, ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಮುಸ್ಲಿಂ ಮಹಿಳೆಯರ ಶೋಷಣೆ ಹಾಗೂ ಕೋಮು ಸೌಹಾರ್ದ- ಈ ಮೂರು ವಿಷಯಗಳ ಕುರಿತು ಕತೆ, ಕಾದಂಬರಿ ಹಾಗೂ ಲೇಖನಗಳನ್ನು ಲೇಖಕಿ ಬರೆದಿದ್ದಾರೆ.
ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಅವರ ಹುಟ್ಟಿದೂರಿನಲ್ಲೇ ನೆರವೇರಿತು. ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. ಎಂಜನಿಯರ್ ಆಗಿದ್ದ ಅಬೂಬಕ್ಕರ್ ಅವರೊಡನೆ ಸಾರಾ ಅವರ ವಿವಾಹ ಏರ್ಪಟ್ಟು ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾರಾ ಅವರು ಶಿವರಾಮ ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ...
READ MORE