ಕಾಯಕಾವ್ಯ

Author : ಕಾತ್ಯಾಯಿನಿ ಕುಂಜಿಬೆಟ್ಟು

Pages 178

₹ 200.00




Year of Publication: 2018
Published by: ಎಸ್.ಎಲ್.ಎನ್. ಪಬ್ಲಿಕೇಷನ್ಸ್
Address: ಬೆಂಗಳೂರು

Synopsys

ಕಾಯಕಾವ್ಯ -ಈ ಕೃತಿಯು ಕಾತ್ಯಾಯಿನಿ ಕುಂಜಿಬೆಟ್ಟು ಅವರ ಕವಿತೆಗಳ ಸಂಕಲನ. ಡಾ. ಸಿದ್ಧಲಿಂಗಯ್ಯ ಅವರು ಕೃತಿಯ ಕುರಿತು ‘ಸೂಕ್ಷ್ಮ ಸಂವೇದನೆಯ ಕವಯತ್ರಿಯು ತಮ್ಮ ಕಾವ್ಯಶಿಲ್ಪದ ವಿಶಿಷ್ಟತೆಯನ್ನು ಪ್ರಕಟಿಸಿದ್ದಾರೆ. ಕಾವ್ಯಕ್ಷೇತ್ರದಲ್ಲಿ ತಮ್ಮ ಬೆಳವಣಿಗೆ, ಪಕ್ವತೆ, ಪ್ರಬುದ್ಧತೆಗಳನ್ನು ಈ ಕವನ ಸಂಕಲನದಲ್ಲಿ ತೋರಿಸಿದ್ದಾರೆ. ಸ್ತ್ರೀವಾದಿ ಚಿಂತನೆಯಿಂದ ಪ್ರೇರಿತರಾಗಿ ಬರೆಯುತ್ತಿರುವುದು ಆರೋಗ್ಯಕರ ಮನಸ್ಥಿತಿ ಎಂದು ಭಾವಿಷುತ್ತೇನೆ. ಇಲ್ಲಿಯ ಅನೇಕ ಕವಿತೆಗಳು ಅವರ ಕಾವ್ಯಶ್ರದ್ಧೆ ಹಾಗೂ ಆತ್ಮವಿಶ್ವಾಸದ ಪ್ರತೀಕವಾಗಿವೆ. ಪರಂಪರೆಗೆ ಮುಖಾಮುಖಿಯಾಗುತ್ತಾ ವರ್ತಮಾನದಲ್ಲಿ ಬೇರು ಬಿಡುವ ಅವರ ಮನೋಧರ್ಮ ಕವಿತೆಗಳ ಯಶಸ್ಸಿಗೆ ಕಾರಣವಾಗಿದೆ’ ಎಂದು ಪ್ರಶಂಸಿಸಿದ್ದಾರೆ. 

About the Author

ಕಾತ್ಯಾಯಿನಿ ಕುಂಜಿಬೆಟ್ಟು

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವಿ.  ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ(ರಿ) ಉಡುಪಿಯ 'ಪಣಿಯಾಡಿ ಪ್ರಶಸ್ತಿ’,  ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ...

READ MORE

Related Books