ಕಬೀರದಾಸರು

Author : ಕಾಶೀನಾಥ ಅಂಬಲಗೆ

Pages 56

₹ 25.00




Year of Publication: 2018
Published by: ಪ್ರಗತಿ ಪ್ರಕಾಶನ
Address: ಜಯನಗರ ವಿಶ್ವವಿದ್ಯಾಲಯ ರಸ್ತೆ, ಕಲಬುರ್ಗಿ- 595105

Synopsys

ಲೇಖಕ ಕಾಶೀನಾಥ ಅಂಬಲಗೆ ಅವರ ಕಿರು ಕೃತಿ ‘ಕಬೀರದಾಸರು’. ಈ ಕೃತಿಯನ್ನು ಲೇಖಕರು ಮಕ್ಕಳಿಗಾಗಿ ರಚಿಸಿದ್ದಾರೆ. ಮಕ್ಕಳ ಬಾಲ್ಯವನ್ನು ಅರ್ಥಪೂರ್ಣವಾಗಿ ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಕೂಡಾ ಮಹತ್ವದ್ದು. ಹಾಗಾಗಿ ಮಕ್ಕಳ ಆರಂಭಿಕ ಓದು ಒಳ್ಳೆಯ ವಿಚಾರಗಳಿಂದ ಆರಂಭವಾಗಬೇಕು. ಅದೇ ಕಾರಣದಿಂದಾಗಿ ಮಹಾತ್ಮರ ಬದುಕಿನ ಕುರಿತು ಅರಿವು ಮೂಡಿಸುವ ಸಲುವಾಗಿ ರಚಿಸಿದ ಹಲವು ಪ್ರಮುಖ ಕಿರುಹೊತ್ತಿಗೆಗಳಲ್ಲಿ ಕಬೀರದಾಸರು ಕೃತಿಯೂ ಒಂದು. ಈ ಕೃತಿಯಲ್ಲಿ ಸಮಾಜ ಸುಧಾರಕ. ಯುಗ ಪ್ರವರ್ತಕ ಎಂದೇ ಪ್ರಸಿದ್ಧಿ ಹೊಂದಿರುವ ಕಬೀರ ದಾಸರ ಬದುಕಿನ ಕುರಿತು ವಿವರಗಳನ್ನು ನೀಡಲಾಗಿದೆ.

About the Author

ಕಾಶೀನಾಥ ಅಂಬಲಗೆ
(10 July 1947)

ಕಾಶೀನಾಥ ಅಂಬಲಗೆ ಅವರು ಹುಟ್ಟಿದ್ದು 10-07-1947 ರಲ್ಲಿ. ಬೀದರ ಜಿಲ್ಲೆಯ, ಬಸವಕಲ್ಯಾಣ ತಾಲೂಕಿನ ಮುಚಳಂಬಿ ಎಂಬ ಗ್ರಾಮದಲ್ಲಿ. ಇವರ ತಂದೆ ರಾಚಪ್ಪ ಅಂಬಲಗೆ, ತಾಯಿ ಗುರಮ್ಮ ಅಂಬಲಗೆ. ಕನ್ನಡದಲ್ಲಿ ಎಂ.ಎ ಪದವಿ ಪಡೆದ ಅಂಬಲಗೆ ಹಿಂದಿ ಭಾಷೆಯಲ್ಲೂ ಎಂ.ಎ ಪದವಿ ಗಳಿಸಿದ್ದಾರೆ. ಬಿ.ಎಡ್ ಜೊತೆಗೆ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಪಿಎಚ್.ಡಿ ಪದವಿಯನಂತರ ಅಧ್ಯಾಪಕ ವೃತ್ತಿಯನ್ನು ಆಯ್ದುಕೊಂಡ ಅವರು ಮಹಾವಿದ್ಯಾಲಯದಲ್ಲಿ 21ವರ್ಷ, ವಿಶ್ವವಿದ್ಯಾಲಯದಲ್ಲಿ 12 ವರ್ಷ ಹಿಂದಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಜೊತೆಗೆ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿಯೂ ತೊಡಗಿಸಿಕೊಂಡಿದ್ದಾರೆ.  ಕವಿ, ಲೇಖಕ, ಸಾಹಿತಿ, ಕಾದಂಬರಿಗಾರರಾದ ಅಂಬಲಗೆ ಅನುವಾದಕರಾಗಿಯೂ ಪ್ರಸಿದ್ಧರು. ಜೊತೆಗೆ ...

READ MORE

Related Books