ಕಡಕೋಳ ಮಡಿವಾಳಪ್ಪ ಮತ್ತು ಶಿಷ್ಯರ ತತ್ವಪದಗಳು

Author : ಮೀನಾಕ್ಷಿ ಬಾಳಿ

Pages 406

₹ 72.00




Year of Publication: 2017
Published by: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ
Address: ಎರಡನೆಯ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-2
Phone: 08022773147

Synopsys

ಕನ್ನಡದ ಪ್ರಮುಖ ತತ್ವಪದಕಾರರಲ್ಲಿ ಒಬ್ಬರಾದ ಕಡಕೋಳ ಮಡಿವಾಳಪ್ಪ ನೇರ-ನಿರ್ಭಿಡೆಯ ಕವಿ. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಕಲಬುರ್ಗಿ ಜಿಲ್ಲೆಯ ಕಡಕೋಳದವರಾದ ಮಡಿವಾಳಪ್ಪ ತನ್ನ ಪ್ರಖರ ವಿಚಾರಗಳನ್ನು ತತ್ವಪದಗಳಲ್ಲಿ ದಾಖಲಿಸಿದವರು. ಸಮಾಜದ ಅರೆಕೊರೆಗಳನ್ನು ತಿದ್ದುವ ಉದ್ದೇಶದಿಂದ ಕಟುವಾದ ಪದಗಳಲ್ಲಿ ತನ್ನ ಹಾಡುಗಳನ್ನು ಬರೆದ ಮಡಿವಾಳಪ್ಪ ಅವರು ತತ್ವಪದಗಳ ಸಾಲಿಗೆ ಹಲವು ಶಿಷ್ಯರನ್ನೂ ಸೇರಿಸಿದವರು. ಈ ಸಂಪುಟದಲ್ಲಿ ಕಡಕೋಳ ಮಡಿವಾಳಪ್ಪ ಮತ್ತು ಅವರ ಶಿಷ್ಯರ ತತ್ವಪದಗಳನ್ನು ಸಂಕಲಿಸಲಾಗಿದೆ.

About the Author

ಮೀನಾಕ್ಷಿ ಬಾಳಿ
(22 June 1962)

ಸಂಶೋಧಕಿ, ಮಹಿಳಾ ಹೋರಾಟಗಾರ್ತಿ, ಬರಹಗಾರ್ತಿ, ಚಿಂತಕಿ ಮೀನಾಕ್ಷಿ ಬಾಳಿ ಅವರು ಕನ್ನಡದ ಪ್ರಮುಖ ಲೇಖಕಿ. ಸದಾ ಚಿಂತನೆಯತ್ತ ತಮ್ಮ ನಡೆ-ನುಡಿಯನ್ನು ಕೊಂಡೊಯ್ಯುವ ಮೀನಾಕ್ಷಿ 1962 ಜೂನ್ 22 ಗುಲ್ಬರ್ಗಾದಲ್ಲಿ ಜನಿಸಿದರು. ’ಮಡಿವಾಳಪನವರ ಶಿಷ್ಯರ ತತ್ವ ಪದಗಳು, ಖೈನೂರು ಕೃಷ್ಣಪ್ಪನವರ ತತ್ವಪದಗಳು, ಅನುಭಾವಿ ಕವಿ ಕಡಕೋಳ ಮಡಿವಾಳಪ್ಪನವರು ಮತ್ತು ಅವರ ಶಿಷ್ಯರು, ತನ್ನ ತಾನು ತಿಳಿದ ಮೇಲೆ, ಚಿವುಟದಿರಿ ಚಿಗುರು, ಮನದ ಸೂತಕ ಹಿಂಗಿದೊಡೆ’ ಮುಂತಾದ ಪ್ರಮುಖ ಕೃತಿಗಳನ್ನು ಹೊರತಂದಿದ್ಧಾರೆ. ’ಮನದ ಸೂತಕ ಹಿಂಗಿದೊಡೆ’ ಕೃತಿಗೆ ಕರ್ನಾಟಕ ಲೇಖಕಿಯರ ಸಂಘದಿಂದ ಕಮಲಾ ರಾಮಸ್ವಾಮಿ ದತ್ತಿ ಬಹುಮಾನ ಲಭಿಸಿದೆ.    ...

READ MORE

Related Books