ಕಡಲೆಪುರಿ

Author : ಜಿ.ಪಿ. ರಾಜರತ್ನಂ

Pages 40




Year of Publication: 1948
Published by: ಪ್ರೋಗ್ರೆಸ್ ಬುಕ್ ಸ್ಟಾಲ್
Address: ಮೈಸೂರು

Synopsys

ಮಕ್ಕಳ ಸಾಹಿತ್ಯ ರಚನೆಯಲ್ಲಿ ಜಿ.ಪಿ. ರಾಜರತ್ನಂ ಅವರ ಒಲವು ಪ್ರಶಂಸನೀಯ. ಸಂಕಲನದಲ್ಲಿ ಕನ್ನಡ ನಾಡಿನ ಕಂದನಿಗೆ, ಕಡಲೆಪುರಿ, ಕುರುಬನ ಕುರಿ, ಕಳ್ಳ ಮಲ್ಲ, ಛೂ! ಛೂ! ಛೂ!, ನವಿಲು, ಕಳ್ಳ ರಂಗಪ್ಪ ಹೀಗೆ ಒಟ್ಟು 18 ಕವಿತೆಗಳು ಮಕ್ಕಳ ಮನವನ್ನು ಸೆಳೆಯುತ್ತವೆ. ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಂಡು ಅವರ ಮನಸ್ಸಿನಲ್ಲಿ ಪರಕಾಯ ಪ್ರವೇಶ ಎಂಬಂತೆ ಸಿದ್ಧಿಗೈದು ಬರೆವ ಕೆಲವೇ ಕೆಲವು ಕವಿಗಳ ಪೈಕಿ ಜಿ.ಪಿ. ರಾಜರತ್ನಂ ಪ್ರಮುಖರು. ಬಹುತೇಕ ಕವನಗಳಿಗೆ ಆಕರ್ಷಕ ಚಿತ್ರಗಳನ್ನು ಬಿಡಿಸಿರುವುದು ಕವನದ ಸಾಹಿತ್ಯಕ್ಕೆ ಮತ್ತಷ್ಟು ಮೆರುಗು ಹೆಚ್ಚಿದೆ.

About the Author

ಜಿ.ಪಿ. ರಾಜರತ್ನಂ
(05 December 1904 - 13 March 1979)

ಆಡುಮಾತಿನ ಪದಗಳ ಬಳಕೆಯ ‘ರತ್ನನ ಪದಗಳು’ ಮೂಲಕ ಜನಪ್ರಿಯರಾಗಿದ್ದ ಜಿ.ಪಿ. ರಾಜರತ್ನಂ ಅವರು ಕನ್ನಡ ಸಾಹಿತ್ಯದ ಪರಿಚಾರಿಕೆಗೂ ಹೆಸರಾಗಿದ್ದರು. ರಾಜರತ್ನಂ ಅವರು ಜನಿಸಿದ್ದು ಬೆಂಗಳೂರು ಜಿಲ್ಲೆಯ ರಾಮನಗರದಲ್ಲಿ 1908ರ ಡಿಸೆಂಬರ್ 8 ರಂದು. ತಂದೆ ಜೆ.ಪಿ. ಗೋಪಾಲಕೃಷ್ಣಯ್ಯಂಗಾರ್. ರಾಜರತ್ನಂ ಅವರು ಮೈಸೂರಿನಲ್ಲಿ ಪ್ರೌಢಶಾಲಾ ಶಿಕ್ಷಣ ಮುಗಿಸಿ, ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ. ಮತ್ತು ಮೈಸೂರು ಮಹಾರಾಜ ಕಾಲೇಜಿನಲ್ಲಿ ಎಂ.ಎ. ಪದವಿ ಗಳಿಸಿದರು. ಅನಂತರ ಮೈಸೂರು, ತುಮಕೂರು, ಶಿವಮೊಗ್ಗ, ಬೆಂಗಳೂರು ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಅವರು 1964ರಲ್ಲಿ ನಿವೃತ್ತರಾದ ಮೇಲೆ ಯುಜಿಸಿ ಉಪಾಧ್ಯಾಯರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು. ಕವಿ, ...

READ MORE

Related Books