ಕಾಡುವ ಸಾಧಕರ ಸಂಗತಿಗಳು

Author : ಅಗ್ನಿ ಶ್ರೀಧರ್

Pages 160

₹ 108.00




Year of Publication: 2012
Published by: ಅಂಕಿತ ಪುಸ್ತಕ
Address: #53 ಶಾಮಸಿಂಗ್ ಸಂಕೀರ್ಣ, ಗಾಂಧಿಬಜಾರ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
Phone: 0802661 7100

Synopsys

ಲೇಖಕ-ಪತ್ರಕರ್ತ ಅಗ್ನಿ ಶ್ರೀಧರ ಅವರ ಕೃತಿ-ಕಾಡುವ ಸಾಧಕರ ಸಂಗತಿಗಳು. ಪ್ರಸ್ತುತ ಸಂಗತಿಗಳಿಗೆ ತಮ್ಮ ಪ್ರತಿಕ್ರಿಯೆಗಳ ಮೂಲಕ ಓದುಗರಿಗೆ ಚಿಂತನೆಗೆ ತೊಡಗಿಸುತ್ತದೆ. ಜನಪರವಾದ ಬೌದ್ಧಿಕ ಚಿಂತನೆಗಳು ಹರಳುಗಟ್ಟಿದೆ. ಈ ಬರಹಗಳಲ್ಲಿನ ದಿಟ್ಟತನ, ಕಾಳಜಿ ಅವರ ವ್ಯಕ್ತಿತ್ವದ ಸ್ಪಂದನಶೀಲ ಗುಣವನ್ನು ಎತ್ತಿ ತೋರಿಸುತ್ತದೆ. ಹಲವಾರು ವಿಚಾರಗಳು, ವ್ಯಕ್ತಿ, ಸಿದ್ಧಾಂತಗಳನ್ನು ಕುರಿತು ತಮ್ಮ ನಿಲುವು, ಕನಸು, ದುಗುಡ, ರೋಷ ಎಲ್ಲವನ್ನೂ ವ್ಯಕ್ತಪಡಿಸುತ್ತವೆ. ಬಹುತೇಕ ಬರಹಗಳು ಅಗ್ನಿ ಪತ್ರಿಕೆಯಲ್ಲಿ ಪ್ರಕಟವಾಗಿವೆ. 

About the Author

ಅಗ್ನಿ ಶ್ರೀಧರ್

ಅಗ್ನಿ ಶ್ರೀಧರ್ ಪತ್ರಕರ್ತರು, ಲೇಖಕರು, ಚಲನಚಿತ್ರ ಸಂಭಾಷಣೆಗಾರರು ಹಾಗೂ ನಿರ್ದೇಶಕರು. ಅಗ್ನಿ ಎಂಬ ವಾರಪತ್ರಿಕೆಯನ್ನು ನಡೆಸುತ್ತಿದ್ದಾರೆ. ಅವರು ಕರುನಾಡ ಸೇನೆಯ ಸ್ಥಾಪಕರೂ ಸಹ ಆಗಿದ್ದಾರೆ. ನಂತರ ಅವರು ಸಾಪ್ತಾಹಿಕ ಕನ್ನಡ ವೃತ್ತಪತ್ರಿಕೆ, ಅಗ್ನಿಯನ್ನು ಸ್ಥಾಪಿಸಿದರು ಮತ್ತು ವೃತ್ತಿಪರ ಬರಹಗಾರರಾಗಿದ್ದಾರೆ. "ದಾದಗಿರಿಯ ದಿನಗಳು" ಎಂಬ ಪುಸ್ತಕವನ್ನು ಬರೆದಿದ್ದಾರೆ. ಅಗ್ನಿ ಅಸ್ತ್ರ ಎಂಬ ಯು- ಟ್ಯೂಬ್ ಚಾನಲ್‌ನಲ್ಲೂ ತಮ್ಮ ವಿಮರ್ಷೆಗಳನ್ನು ಪ್ರಕಟಿಸಿದ್ದಾರೆ. ಅವರ ಪುಸ್ತಕಗಳು- ಆಧುನಿಕ ಮಾಂತ್ರಿಕರ ಜಾಡಿನಲ್ಲಿ, ಕ್ವಾಂಟಂ ಜಗತ್ತು, ಟಿಬೇಟಿಯನ್ನರ ಸತ್ತವರ ಪುಸ್ತಕ, ಕಾಡುವ ಸಾಧಕರು, ಸಂಗತಿಗಳು, ತೊಟ್ಟಿಕ್ಕುತ್ತಲೇ ಇದೆ ನೆತ್ತರು, ಎದೆಗಾರಿಕೆ, ದಾದಾಗಿರಿಯ ದಿನಗಳು ಭಾಗ-1, ...

READ MORE

Related Books