ಕಾಡು ಕನಸಿನ ಬೀಡಿಗೆ

Author : ಚಂದ್ರಕಾಂತ ಕರದಳ್ಳಿ

Pages 100

₹ 80.00




Published by: ವಿಚಾರ ಪ್ರಕಾಶನ
Address: 'ಶಿವ ಪ್ರಸಾದ’, ಲಕ್ಷ್ಮೀ ನಗರ, ಶಹಾಪುರ- 585223
Phone: 08419-243192 / 9448595212

Synopsys

ಕಾಡೆಂದರೆ ಮಕ್ಕಳಿಗೆ ಕುತೂಹಲ, ವನ್ಯ ಜೀವಿಗಳೆಂದರೆ ಪ್ರೀತಿ-ಆಸಕ್ತಿ. ಕಾಡಿನ ಅನುಭವವನ್ನು ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ರಚಿಸಲಾದ ಕಾದಂಬರಿ. ಸರಳವಾದ ಕನ್ನಡದಲ್ಲಿ ರಚಿತವಾಗಿರುವ ಈ ಕಾದಂಬರಿಯನ್ನು ಓದಿ ಮುಗಿಸುತ್ತಿದ್ದಂತೆ ಕಾಡು ಹೊಕ್ಕು ಹೊರ ಬಂದ ಅನುಭವ ಆಗುತ್ತದೆ. ಮಕ್ಕಳಲ್ಲಿ ಆಸಕ್ತಿ ಹುಟ್ಟಿಸಿ-ಕುತೂಹಲ ತಣಿಸುವಲ್ಲಿ ಕಾದಂಬರಿ ಯಶ ಕಂಡಿದೆ. ಮಕ್ಕಳನ್ನೇ ಗಮನದಲ್ಲಿ ಇಟ್ಟುಕೊಂಡು ರಚಿತವಾಗಿರುವ ಈ ಕಾದಂಬರಿಯು ಮಕ್ಕಳ ಮನ ಮುಟ್ಟುವಲ್ಲಿ ಯಶಸ್ವಿಯಾಗಿದೆ. ಮಕ್ಕಳ ಸಾಹಿತಿಯಾಗಿ ಹೆಸರು ಮಾಡಿರುವ ಚಂದ್ರಕಾಂತ ಕರದಳ್ಳಿ ಅವರು ಮಕ್ಕಳಿಗೆ ಪ್ರಿಯವಾಗುವ ಹಾಗೆ ಕಾದಂಬರಿಯ ಮೂಲಕ ಕಾಡಿನ ವಿಭಿನ್ನ ಚಿತ್ರಣವನ್ನು ಕಟ್ಟಿಕೊಟ್ಟಿದ್ದಾರೆ. ಕಾಡು ಮತ್ತು ನಾಡಿನ ನಡುವಿನ ಸಂಬಂಧವನ್ನು ಬೆಸೆಯುವ ಹಾಗೂ ಆರೋಗ್ಯಕರ ಮನಸ್ಸುಗಳನ್ನು ಸೃಷ್ಟಿಸುವ ಕಾದಂಬರಿಯು ಓದುಗರ ಮನ ಗೆಲ್ಲುತ್ತದೆ. ಈ ಕಾದಂಬರಿಗೆ ಕೇಂದ್ರ ಸಾಹಿತ್ಯ ಆಕಾಡೆಮಿಯ ’ಬಾಲ ಸಾಹಿತ್ಯ ಪುರಸ್ಕಾರ’ ಸಂದಿದೆ.

About the Author

ಚಂದ್ರಕಾಂತ ಕರದಳ್ಳಿ
(25 August 1952)

ಮಕ್ಕಳ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿರುವ ಚಂದ್ರಕಾಂತ ಕರದಳ್ಳಿಯವರು‌ ಯಾದಗಿರಿ ಜಿಲ್ಲೆಯ ಶಹಾಪುರದವರು.‌ 1952ರ ಆಗಸ್ಟ್ 25ರಂದು ಜನಿಸಿದರು. ತಂದೆ ರಾಚಯ್ಯಸ್ವಾಮಿ ಕರದಳ್ಳಿ. ತಾಯಿ ಮುರಿಗೆಮ್ಮ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ (1985) ಪದವಿ‌ ಪಡೆದ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಡ್. ಪದವಿ ಗಳಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಪ್ರೌಢಶಾಲಾ ಶಿಕ್ಷಕರಾದರು. 2012ರಲ್ಲಿ ನಿವೃತ್ತರಾದರು.  ಮಕ್ಕಳ ಕತೆ, ಕಾದಂಬರಿ, ಕಾವ್ಯ ರಚಿಸಿರುವ ಕರದಳ್ಳಿ ಅವರಿಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಯಾದಗಿರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ...

READ MORE

Awards & Recognitions

Related Books