ಕಾಲದ ಸಾಕ್ಷಿಯಾಗಿ

Author : ಧನಪಾಲ ನಾಗರಾಜಪ್ಪ

Pages 88

₹ 80.00




Year of Publication: 2021
Published by: ಧನಪಾಲ ನಾಗರಾಜಪ್ಪ
Address: ನೆಲವಾಗಿಲು ಗ್ರಾಮ & ಅಂಚೆ, ನಂದಗುಡಿ ಹೋಬಳಿ, ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ- 562122,
Phone: 7892546523

Synopsys

`ಕಾಲದ ಸಾಕ್ಷಿಯಾಗಿ' ಎಂಬುದು ಅಬಾಬಿ ಸಂಕಲನ. ತೆಲುಗು ಮೂಲದ  ಷೇಕ್ ಅಬ್ದುಲ್ ಹಕೀಂ ಅವರ ಮೊದಲ ಕೃತಿಯನ್ನು ಕವಿ-ಲೇಖಕ ಧನಪಾಲ ನಾಗರಾಜಪ್ಪ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ಅಬಾಬಿಗಳು ಹೊಸ ಪ್ರಕಾರವನ್ನು ಸೃಷ್ಟಿಸಿವೆ.  ಈ ಕೃತಿಯು, ಸಾಹಿತ್ಯ ಚರಿತ್ರೆಯಲ್ಲಿ ಪ್ರಕಟಿತ ಎರಡನೇ ಅಬಾಬಿ ಸಂಕಲನವಾಗಿದೆ.  

ಕೃತಿಗೆ ಬೆನ್ನುಡಿ ಬರೆದ ಲೇಖಕಿ ಬೆಳಗಾವಿಯ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅವರು ‘ಜಾಗತಿಕ ಸಂತರ ಮಹೋನ್ನತವಾದ ತತ್ವಾದರ್ಶಗಳನ್ನು ಪ್ರತಿನಿಧಿಸುವ ಅಬಾಬಿಗಳಲ್ಲಿನ ಅಭಿವ್ಯಕ್ತಿಗಳು ನಿಜಕ್ಕೂ ಮಾನವೀಯ ಉಕ್ತಿಗಳಾಗಿವೆ. ಒಬ್ಬ ಕವಿಯ ಅಂತರಾಳದ ಜಿಜ್ಞಾಸೆಗಳು  ಕೇವಲ ಆಯಾ ಭಾಷಿಕ ನೆಲೆಗಳಲ್ಲಿ ಮಾತ್ರ ಉಳಿದುಕೊಳ್ಳುವುದ ರಿಂದ ಸಾರ್ವತ್ರಿಕ ಸಿದ್ಧಾಂತಗಳು ಆಸಕ್ತರನ್ನು ತಲುಪುವಲ್ಲಿ ಸೋಲುತ್ತಿವೆ. ಇಂತಹ ಕೊರತೆಯನ್ನು ತುಂಬಬಲ್ಲ ಶಕ್ತಿ ಇರುವುದು ಅನುವಾದಕ್ಕೆ ಮಾತ್ರ. ಈ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿರುವ ಧನಪಾಲ ನಾಗರಾಜಪ್ಪ ಅವರು ಅಭಿನಂದನಾರ್ಹರು’ ಎಂದು ಪ್ರಶಂಸಿಸಿದ್ದಾರೆ. 

About the Author

ಧನಪಾಲ ನಾಗರಾಜಪ್ಪ
(20 June 1987)

ಧನಪಾಲ ನಾಗರಾಜಪ್ಪನವರು ಅನುವಾದಕರಾಗಿ ಚಿರಪರಿಚಿತರು. ನಾಗರಾಜಪ್ಪ ಹಾಗೂ ರಾಮಚಂದ್ರಮ್ಮ ದಂಪತಿಯ ಮಗನಾಗಿ 20-06-1987 ರಂದು ಅವಿಭಜಿತ ಕೋಲಾರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ. ಜನಿಸಿದರು. ಭಾರತೀಯ ವಾಯು ಸೈನ್ಯದಲ್ಲಿ PBOR ಶ್ರೇಣಿಯಲ್ಲಿ ಕಳೆದ 15 ವರ್ಷಗಳಿಂದ ಏರ್ ಮೆನ್ ಆಗಿ ವೈದ್ಯಕೀಯ ಸಹಾಯಕನ ವೃತ್ತಿ. ಕಳೆದ 15 ವರ್ಷಗಳಿಂದ ಸಾಹಿತ್ಯಿಕ ಕೃಷಿಯಲ್ಲಿ ನಿರತನಾಗಿದ್ದು ಸ್ವ ರಚನೆ, ಸಂಪಾದನೆ, ಪ್ರಕಾಶನ ಮತ್ತು ಅನುವಾದದ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ನಿವೇದನೆ (ಕವನ ಸಂಕಲನ), ಮಿತ್ರವಾಣಿ (ಪ್ರಧಾನ ಸಂಪಾದಕತ್ವದ ಕವನ ಸಂಕಲನ), ಕಾಡುವ ಕಥೆಗಳು (ಅನುವಾದಿತ ಕಥಾ ಸಂಕಲನ, ತೆಲುಗು ಮೂಲ : ಸಲೀಂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು), ತಣ್ಣೀರ ...

READ MORE

Related Books