ಕನ್ನಡ ದೇಸಿ ಸಮ್ಮಿಲನದ ನುಡಿಗಳು

Author : ಬಿ.ಎ. ವಿವೇಕ ರೈ

Pages 175

₹ 180.00




Published by: ಆಕೃತಿ ಆಶಯ ಪಬ್ಲಿಕೇಶನ್
Address: ಮಂಗಳೂರು

Synopsys

ಸುಮಾರು ಇಪ್ಪತ್ತೈದು ವರ್ಷಗಳ ಹರಹಿನ ಅವರ ಭಾಷಣಗಳ ಸಂಗ್ರಹ ಇಲ್ಲಿವೆ. ಜಾನಪದ ಮತ್ತು ದೇಸಿ ಸಮ್ಮೇಳನಗಳ ಅಧ್ಯಕ್ಷ ಭಾಷಣಗಳಿಂದ ತೊಡಗಿ ಜಾನಪದ ಸಂಬಂಧಿಯಾದ ಇತರ ಹಲವು ಉಪನ್ಯಾಸಗಳು ಇಲ್ಲಿ ಒಟ್ಟು ಸೇರಿವೆ. ಇದರ ಜೊತೆಗೆ ಕನ್ನಡ ವಿಶ್ವವಿದ್ಯಾನಿಲಯ ಹಂಪಿಯಲ್ಲಿ ಅವರು ಕುಲಪತಿಯಾಗಿದ್ದ ಅವಧಿಯಲ್ಲಿ ನಡೆಸಿದ ಮೂರು ನುಡಿ ಹಬ್ಬಗಳ ಸ್ವಾತ ಭಾಷಣಗಳು, ಕನ್ನಡ ವಿಶ್ವವಿದ್ಯಾನಿಲಯದೊಳಗಿನ ಅವರ ಕೆಲಸಗಳನ್ನು ಮತ್ತು ಚಿಂತೆಗಳನ್ನು ದಾಖಲು ಮಾಡುತ್ತವೆ. ಇವುಗಳ ಜೊತೆಗೆ ಕನ್ನಡ ವಿವಿಶ್ವವಿದ್ಯಾನಿಲಯದ ಹಸ್ತಪ್ರತಿ ಸಮ್ಮೇಳನ, ದೇಸೀ ಸಮ್ಮೇಳನ ಮತ್ತು ಇತರ ವಿಚಾರಸಂಕಿರಣಗಳ ಮಾತುಗಳು ಬರಹ ರೂಪ ಪಡೆದಿವೆ. ತುಂಬ ಹಳೆಯ ಆದರ ನೆನಪಿನ ದೃಷ್ಟಿಯಿಂದ ಬಹಳ ಮಹತ್ವದ ಮಂಗಳೂರು ವಿವಿ 1988ರ ವಿಚಾರ ಸಂಕಿರಣದ ಮಾತುಗಳನ್ನೂ ಇಲ್ಲಿ ಜೋಡಿಸಲಾಗಿದೆ.

About the Author

ಬಿ.ಎ. ವಿವೇಕ ರೈ
(08 December 1946)

ಡಾ. ಬಿ.ಎ.ವಿವೇಕ ರೈ ಸಂಸ್ಕೃತಿ ಚಿಂತಕರು. ಕನ್ನಡ-ತುಳು ಭಾಷೆಯ ಆಂತರಿಕ ಶಕ್ತಿ-ಸಂಪತ್ತನ್ನು ಸಂವರ್ಧಿಸಿದ ವಿದ್ವಾಂಸರು. ಅವರ ಹುಟ್ಟೂರು ಪುತ್ತೂರು ತಾಲೂಕಿನ 'ಪುಣಚಾ'. (ಜನನ: 1946ರ ಡಿಸೆಂಬರ್ 8ರಂದು), ಹುಟ್ಟೂರಿನಲ್ಲೇ ಪ್ರಾಥಮಿಕ ಶಿಕ್ಷಣ, ಮತ್ತೂರಿನಲ್ಲಿ ಪಿಯುಸಿ, ಬಿಎಸ್ಸಿ ವ್ಯಾಸಂಗ, ಮೈಸೂರು ವಿಶ್ವವಿದ್ಯಾನಿಲಯದ ಮಂಗಳೂರು ಸ್ನಾತಕೋತ್ತರಕೇಂದ್ರ ದಲ್ಲಿ ಕನ್ನಡ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಜೊತೆಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾ.ಹಾ.ಮಾ.ನಾಯಕರ ಮಾರ್ಗದರ್ಶನದಲ್ಲಿ ಪಿಎಚ್.ಡಿ. ಪದವಿಯನ್ನು ಪಡೆದಿದ್ದಾರೆ.  ಕನ್ನಡ ಮತ್ತು ತುಳು ಭಾಷೆಯ ಬಗ್ಗೆ ಅಪಾರ ಒಲವು-ಪಾಂಡಿತ್ಯ ಉಳ್ಳವರು. ಭಾಷಾ ಅಧ್ಯಯನದ ಮಾದರಿಗಳನ್ನು ರೂಪಿಸಿದ ವಿದ್ವಾಂಸರು. ಸಂಶೋಧನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ, ರೀಡರ್, ಪ್ರಾಧ್ಯಾಪಕ, ...

READ MORE

Related Books