ಕನಕದಾಸರು ಮತ್ತು ಮಹಾರಾಷ್ಟ್ರದ ಸಂತರು

Author : ರಾಮಕೃಷ್ಣ ಮರಾಠೆ

Pages 126

₹ 90.00




Year of Publication: 2018
Published by: ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ
Address: ಕಾಗಿನೆಲೆ, ಬ್ಯಾಡಗಿ ತಾಲ್ಲೂಕು, ಹಾವೇರಿ ಜಿಲ್ಲೆ
Phone: 08375-289388

Synopsys

ಲೇಖಕ ರಾಮಕೃಷ್ಣ ಮರಾಠೆ ಅವರ ತುಲನಾತ್ಮಕ ಅಧ್ಯಯನ ಕೃತಿ ʻಕನಕದಾಸರು ಮತ್ತು ಮಹಾರಾಷ್ಟ್ರದ ಸಂತರುʼ. ಕನ್ನಡ ಹರಿದಾಸ ಪರಂಪರೆಯಲ್ಲಿ ಕನಕದಾಸರ ಹೆಸರು ಬಹು ವಿಶಿಷ್ಟವಾದುದು. ಅವರ ಸಾಹಿತ್ಯದಲ್ಲಿನ ವಿಚಾರಧಾರೆಗಳು ಆಧ್ಯಾತ್ಮ, ವೈಚಾರಿಕ, ಸಾಮಾಜಿಕ ಕಳಕಳಿಯನ್ನು ಹೊಂದಿರುವಂತವು. ಕನ್ನಡ ಮತ್ತು ಮರಾಠಿ ಭಾಷೆಗಳ ನಡುವಿನ ಬಾಂಧವ್ಯ ಗತಕಾಲದಿಂದಲೂ ನಡೆದು ಬಂದಿದೆ. ಕರ್ನಾಟಕದ ಹರಿದಾಸ ಪರಪಂರೆ ಹಾಗೂ ಮಹಾರಾಷ್ಟ್ರದ ವಾರಕರಿ ಪಂಥದ ದಾರಿ ಭಾಷೆಯನ್ನು ಹೊರತು ಪಡಿಸಿದರೆ, ಚಿಂತನೆಯ ದಾರಿ ಒಂದೇ ಆಗಿದೆ. ಈ ಹಿನ್ನೆಲೆಯಲ್ಲಿ ರಾಮಕೃಷ್ಣ ಮರಾಠೆ ಅವರು ಕನಕದಾಸರ ಜೀವನ, ಸಾಹಿತ್ಯ, ಸಾಮಾಜಿಕ, ಧಾರ್ಮಿಕ, ವೈಚಾರಿಕ ಚಿಂತನೆಗಳು ಹೀಗೆ ವಿಭಿನ್ನ ನೆಲೆಯಲ್ಲಿ ಅಧ್ಯಯನ ಮಾಡಿ ಈ ಕೃತಿಯನ್ನು ರಚಿಸಿದ್ದಾರೆ. ಪುಸ್ತಕದ ಪರಿವಿಡಿಯಲ್ಲಿ ಭಕ್ತಿ ಚಳುವಳಿ, ವಾರಕರಿ ಸಂಪ್ರದಾಯ, ಹರಿದಾಸ ಸಂಪ್ರದಾಯ, ಹಾಗೂ ಕನಕದಾಸರು- ಮಾರಾಠಿ ಸಂತರು ಶೀರ್ಷಿಕೆಗಳ ಲೇಖನಗಳಿವೆ.

About the Author

ರಾಮಕೃಷ್ಣ ಮರಾಠೆ
(25 May 1958)

ನಾಟಕಕಾರ ರಾಮಕೃಷ್ಣ ಮರಾಠೆ ಅವರು 1958 ಮೇ 25 (ಸಿಂದಗಿ-ಬಿಜಾಪುರ) ಜನಿಸಿದರು. ಕನ್ನಡಲ್ಲಿ ಪಿಎಚ್‌.ಡಿ ಪದವೀಧರರು. ಕನ್ನಡ ಅಧ್ಯಾಪಕರು. ‘ಉತ್ತರ ಕರ್ನಾಟಕದ ರಂಗಭೂಮಿ, ಕೊಣ್ಣೂರ ನಾಟಕ ಕಂಪನಿ, ಈ ರಂಗಭೂಮಿಯ ಕನ್ನಡ ಸಂವೇದನೆ’ ಅವರ ಸಂಶೋಧನಾ ಕೃತಿಗಳು. ‘ರಾಮಧಾನ್ಯ, ದಾಸೋಹ; ಅಲ್ಲಮಲೀಲೆ’ ಅವರ ಪ್ರಮುಖ ನಾಟಕ. ‘ಬಿ.ಆರ್. ಅರಿಷಿಣಗೋಡಿ; ಬೆಳಗಾವಿ ಭಗೀರಥ; ವಿಶ್ವನಾಥ ಕತ್ತಿ’ ಅವರ ಜೀವನ ಚಿತ್ರಣ ಕೃತಿಗಳನ್ನು ಸಂಪಾದಿಸಿದ್ದಾರೆ.  ‘ಹರಿಹರನ ನಾಲ್ಕು ರಗಳೆಗಳು, ನಾಟ್ಯಭೂಷಣ ಏಣಗಿ ಬಾಳಪ್ಪ, ವೃತ್ತಿ ರಂಗದ ಮಹತ್ತರ ನಾಟಕಗಳು’ ಅವರ ಸಂಪಾದಿತ ಕೃತಿಗಳು. ಅಲ್ಲದೆ ‘ದಕ್ಷಿಣದ ದೇಸೀ ದೇವರು ಶ್ರೀ ಖಂಡೋಬಾ; ಭವಿರ ...

READ MORE

Related Books