ಕಂಗಳ ಬೆಳಗು

Author : ಸತ್ಯಮಂಗಲ ಮಹಾದೇವ

Pages 292

₹ 300.00




Year of Publication: 2021
Published by: ಅನ್ನಪೂರ್ಣ ಪಬ್ಲಿಷಿಂಗ್ ಹೌಸ್
Address: ಬೆಂಗಳೂರು

Synopsys

ಡಾ.ಸತ್ಯಮಂಗಲ ಮಹಾದೇವ ಅವರ ಕೃತಿ ಕಂಗಳ ಬೆಳಕು, ಬೇಂದ್ರೆ ಮತ್ತು ಮಧುರಚೆನ್ನರ ಕಾವ್ಯಗಳಲ್ಲಿ ಅನುಭಾವ: ತೌಲನಿಕ ಅಧ್ಯಯನ. ಈ ಕೃತಿಗೆ ಪ್ರೊ ಮಲ್ಲೇಪುರಂ ಜಿ. ವೆಂಕಟೇಶ್ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.

’ ಡಾ. ಸತ್ಯಮಂಗಲ ಮಹಾದೇವ ಇವರ ಕಂಗಳ ಬೆಳಕು ಒಂದು ಅತ್ಯಪೂರ್ವ ವಿಶ್ಲೇಷಣಾತ್ಮಕ ಕೃತಿ. ಬೇಂದ್ರೆ ಮತ್ತು ಮಧುರ ಚೆನ್ನರ ಕಾವ್ಯಗಳಲ್ಲಿ ಅನುಭಾವದ ನೆಲೆಗಳ ಸ್ವರೂಪವನ್ನು ಈ ಕೃತಿಯು ಪರಿಶೋಧಿಸುತ್ತದೆ. ಡಾ. ಸತ್ಯಮಂಗಲ ಮಹಾದೇವ ನಮ್ಮ ನಡುವಿನ ಸೂಕ್ಷ್ಮ ಸಂವೇದಿ ಕಾವ್ಯತತ್ವಜ್ಞ. ಹೀಗಾಗಿ ಅವರು ಇಲ್ಲಿ ನಡೆಸಿರುವ ತುಲನಾತ್ಮಕ ಅಧ್ಯಯನ ಚೇತೋಹಾರಿಯಾಗಿದೆ. ಈ ವಿದ್ವತ್ ಮಹಾಪ್ರಬಂಧದಲ್ಲಿ ಅನುಭಾವದ ತಾತ್ತ್ವಿಕ ವಿಶ್ಲೇಷಣೆ ಇರುವಂತೆ, ಅನ್ವಯಿಕ ಸಂವಿಶ್ಲೇಷಣೆಯೂ ಉಂಟು. ಬೇಂದ್ರೆ ಮತ್ತು ಮಧುರಚೆನ್ನರ ಕವಿತೆಗಳಲ್ಲಿ ಹುದುಗಿರುವ ಅನುಭಾವದ ಆನ್ವಯಿಕತೆಯನ್ನೂ ತಾತ್ತ್ವಿಕತೆಯನ್ನೂ ಸತ್ಯಮಂಗಲ ಮಹಾದೇವ ಸೂಕ್ಷ್ಮವಾಗಿ ಶೋಧಿಸಿ ಸಂವಿಶ್ಲೇಷಣೆಗೆ ಒಳಪಡಿಸಿದ್ದಾರೆ. ಪ್ರಾಚ್ಯ ಹಾಗೂ ಪಾಶ್ಚಾತ್ಯ ತತ್ತ್ವಜ್ಞಾನದ ಖನಿಗಳನ್ನು ಕುರಿತೇಟಿನಂತೆ ಮಹಾದೇವ ಇಲ್ಲಿ ಸೆರೆ ಹಿಡಿದಿದ್ದಾರೆ. ಇದೊಮದು ಅನುಭಾವ ಸಾಹಿತ್ಯಕ್ಕೆ ಮಹತ್ತರ ಕೊಡುಗೆಯೆಂದೇ ನನ್ನ ನಿಶ್ಚಿತ ನಂಬುಗೆ ಎಂದು ಮಲ್ಲೇಪುರಂ ಜಿ ವೆಂಕಟೇಶ್ ಹೇಳಿದ್ದಾರೆ.

About the Author

ಸತ್ಯಮಂಗಲ ಮಹಾದೇವ
(12 June 1983)

ಸತ್ಯಮಂಗಲ ಮಹಾದೇವ ಅವರು ಮೂಲತಃ ತುಮಕೂರು ಜಿಲ್ಲೆ, ತುಮಕೂರು ತಾಲ್ಲೂಕಿನ ಸತ್ಯಮಂಗಲ ಗ್ರಾಮದಲ್ಲಿ 12-06-1983 ರಲ್ಲಿ ರಾಜಣ್ಣ ಮತ್ತು ಜಯಮ್ಮ ದಂಪತಿಯ ಮಗನಾಗಿ ಜನಿಸಿದರು.  ಕನ್ನಡದ ಸಮಕಾಲೀನ ಯುವ ಬರಹಗಾರರಲ್ಲಿ ಸೂಕ್ಷ್ಮಸಂವೇದಿ ಹಾಗೂ ಜೀವಪರ ಚಿಂತನೆಯ ಕವಿಯಾಗಿ,  ಕಾವ್ಯ, ವಿಮರ್ಶೆ, ವ್ಯಕ್ತಿಚಿತ್ರ, ಸಂಪಾದಕೀಯ, ಸಂಶೋಧನೆಯ ಕ್ಷೇತ್ರದಲ್ಲಿ ಕೆಲಸಮಾಡುತ್ತಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2017 ರಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದರು.  ಕೇಂದ್ರಸಾಹಿತ್ಯ ಅಕಾಡೆಮಿಯು ಆಯೋಜಿಸಿದ್ದ "ರಾಷ್ಟ್ರೀಯ ಯುವ ಬರಹಗಾರರ ಸಮ್ಮೇಳನ" ಕೇರಳ, ಪಂಜಾಬ್, ಮಹಾರಾಷ್ಟ್ರ, ಅಸ್ಸಾಂ ಹೀಗೆ ರಾಷ್ಟ್ರದ ಅನೇಕ ಕಡೆಗಳಲ್ಲಿ ಕಾವ್ಯವಾಚನ ಮಾಡಿ ...

READ MORE

Related Books