ಕನ್ನಡ ಭಾಷೆ-ಬದುಕು

Author : ಎಸ್.ಜಿ. ಸಿದ್ಧರಾಮಯ್ಯ

Pages 128

₹ 125.00




Year of Publication: 2019
Published by: ನವಕರ್ನಾಟಕ ಪ್ರಕಾಶನ
Address: 15, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು
Phone: 9480686862

Synopsys

ಕನ್ನಡ ಎದುರಿಸುತ್ತಿರುವ ಸಮಸ್ಯೆ ಸವಾಲುಗಳಿಗೆ ಕಾಲಕಾಲಕ್ಕೆ ಪ್ರತಿಕ್ರಿಯಿಸಿ ಬರೆದ ಲೇಖನಗಳು, ಕನ್ನಡ ಭಾಷೆ ಎದುರಿಸುತ್ತಿರುವ ಹಿಂದಿ ಹೇರಿಕೆ, ಪ್ರಾದೇಶಿಕ ಭಾಷಾ ಹಿಂಜರಿಕೆ, ತಂತ್ರಜ್ಞಾನದಂತಹ ಆಧುನಿಕ ವಿಷಯಗಳನ್ನು ತನ್ನ ಭಾಷೆಯಲ್ಲಿ ಅಳವಡಿಸಿಕೊಳ್ಳುವಲ್ಲಿ ವಿಫಲವಾಗಿರುವುದು ಇನ್ನು ಮುಂತಾದ ಸವಾಲುಗಳ ಬಗ್ಗೆ ಚರ್ಚಿಸಿರುವ ಕೃತಿ ’ಕನ್ನಡ ಭಾಷೆ- ಬದುಕು’. 

ಕನ್ನಡ ಭಾಷೆ ಅಭಿವೃದ್ಧಿ ಪಡಿಸಲು ಆಗಬೇಕಿರುವ ಕಾರ್ಯಗಳು, ನಾವು ಎಡವುತ್ತಿರುವುದು ಎಲ್ಲಿ, ಮಾಡಬೇಕಿರುವುದು ಏನು ಇವೆಲ್ಲವನ್ನು ಲೇಖಕರು ತಮ್ಮ ಕೃತಿಯಲ್ಲಿ ಚರ್ಚಿಸಿದ್ದಾರೆ. 

About the Author

ಎಸ್.ಜಿ. ಸಿದ್ಧರಾಮಯ್ಯ
(19 November 1946)

ಹಿರಿಯ ಸಾಹಿತಿಗಳಾದ ಎಸ್.ಜಿ. ಸಿದ್ಧರಾಮಯ್ಯನವರು ಹುಟ್ಟಿದ್ದು ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ಸಿಂಗಾಪುರ ಗ್ರಾಮದಲ್ಲಿ. ತಂದೆ-ಗುರುಭಕ್ತಯ್ಯ, ತಾಯಿ-ರೇವಮ್ಮ. ಪ್ರಾರಂಭಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪಡೆದ ಅವರು  ಪ್ರೌಢಶಾಲೆ ಚಿಕ್ಕನಾಯಕನಹಳ್ಳಿ ಪೂರ್ಣಗೊಳಿಸಿದರು. ಕಾಲೇಜು ವಿದ್ಯಾಭ್ಯಾಸವನ್ನು ತುಮಕೂರಿನಲ್ಲಿ ಆರಂಭಿಸಿದ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು. ಆನಂತರ ತುಮಕೂರಿನ ಸಿದ್ಧಗಂಗಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ಮಡಿಕೇರಿ, ಸಿಂಧನೂರು, ತುಮಕೂರು, ಕೊರಟಗೆರೆ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ತುಮಕೂರು, ಚಿಕ್ಕನಾಯಕನ ಹಳ್ಳಿ, ಹೊಸದುರ್ಗ, ಮಧುಗಿರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಹುದ್ದೆ ನಿರ್ವಹಿಸಿದ್ದಾರೆ. ಅಲ್ಲದೇ ದುಃಸ್ಥಿತಿಯಲ್ಲಿದ್ದ ಕಾಲೇಜುಗಳಿಗೆ ಶೈಕ್ಷಣಿಕ ಕಾಯಕಲ್ಪ ...

READ MORE

Related Books