ಕನ್ನಡ ಚಂಪೂ ಜೈನ ಪರಿಭಾಷೆ

Author : ಪಿ. ವಿ. ನಾರಾಯಣ

Pages 277

₹ 225.00




Year of Publication: 2021
Published by: ಹೇಮಂತ ಸಾಹಿತ್ಯ
Address: # 972 ‘ಸಿ’ 62ನೇ ಅಡ್ಡರಸ್ತೆ, 10ನೇ ಮುಖ್ಯ, 63ನೇ ಅಡ್ಡರಸ್ತೆ, 4ನೇ ಎಂ-ಬ್ಲಾಕ್, 4ನೇ ಇ-ಬ್ಲಾಕ್, ಮಂಜುನಾಥ ನಗರ, ರಾಜಾಜಿನಗರ, ಬೆಂಗಳೂರು-560010

Synopsys

ಡಾ. ಪಿ.ವಿ. ನಾರಾಯಣ ಅವರ ಕೃತಿ-ಕನ್ನಡ ಚಂಪೂ ಜೈನ ಪರಿಭಾಷೆ. ಕನ್ನಡ ಚಂಪೂ ಕಾವ್ಯಗಳಲ್ಲಿ ಜೈನ ಪರಿಭಾಷೆ ಹಾಗೂ ಪರಿಕಲ್ಪನೆಗಳು ಹೇಗೆ ಹಾಸುಹೊಕ್ಕಾಗಿವೆ ಎಂಬುದರ ವಿಶ್ಲೇಷಣಾತ್ಮಕ ಬರಹಗಳುನ್ನು ಇಲ್ಲಿ ಸಂಕಲಿಸಲಾಗಿದೆ. ಸಾವಿರ ವರ್ಷಗಳಿಗೆ ಮೇಲ್ಪಟ್ಟ ಇತಿಹಾಸ ಚಂಪೂವಿಗಿದೆ. ಈ ಪ್ರಕಾರದಲ್ಲಿ ಆಯಾ ಭಾಷೆಯಲ್ಲಿ ಬಹುಕಾಲ ನಿಲ್ಲುವ ಉತ್ಕೃಷ್ಟವಾದ ಸಾಹಿತ್ಯ ನಿರ್ಮಿತವಾಗಿದೆ. ವಿಶೇಷವಾಗಿ ಜೈನಕವಿಗಳು ಚಂಪೂಕಾವ್ಯಪದ್ಧತಿಯನ್ನು ಸ್ವಧರ್ಮಪ್ರಚಾರಕ್ಕಾಗಿ ಹೇಗೆ ಉಪಯೋಗಿಸಿಕೊಂಡರು. ಈ ಅಂಶವೂ ಸಹ ಪ್ರಮುಖವಾಗಿ ಇಲ್ಲಿ ಕಾಣಿಸಲಾಗಿದೆ.

 

About the Author

ಪಿ. ವಿ. ನಾರಾಯಣ
(18 December 1942)

ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.  ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ  ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...

READ MORE

Related Books