ಕನ್ನಡ ಚಿತ್ರರಂಗ ಒಂದು ವಿವೇಚನೆ

Author : ಎನ್.ಎಸ್. ಶ್ರೀಧರಮೂರ್ತಿ

Pages 200

₹ 120.00




Year of Publication: 2010
Published by: ಅಂಬಾರಿ ಪ್ರಕಾಶನ
Address: 1238, ಮಹಡಿ, 3ನೇ ಕ್ರಾಸ್, ಗಂಗೆ ರಸ್ತೆ, ಕುವೆಂಪುನಗರ, ಮೈಸೂರು- 570023
Phone: 9845890353

Synopsys

‘ಕನ್ನಡ ಚಿತ್ರರಂಗ ಒಂದು ವಿವೇಚನೆ’ ಲೇಖಕ ಎನ್. ಎಸ್. ಶ್ರೀಧರಮೂರ್ತಿ ಅವರ ಕೃತಿ. ಕನ್ನಡ ಚಿತ್ರರಂಗಕ್ಕೆ ತನ್ನದೆ ಆದ ಇತಿಹಾಸವಿದೆ. ಭಾರತದ ಇತರೆ ಭಾಷೆಗಳ ಚಿತ್ರರಂಗಗಳಿಗೆ ಹೋಲಿಸಿದರೆ ಕನ್ನಡ ಚಿತ್ರರಂಗದ ವ್ಯಾಪ್ತಿ ಮತ್ತು ಇತಿಹಾಸ ಚಿಕ್ಕದೆನಿಸಿದರೂ ಅದು ಇತ್ತೀಚಿನ ದಿನಗಳಲ್ಲಿ ಸಾಧಿಸಿರುವ ಸಾಧನೆ ಕಡಿಮೆಯದೇನಲ್ಲ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಅಸಾಧಾರಣ ಪ್ರತಿಭೆ ತೋರಿದ ನಿರ್ದೇಶಕರು, ಕಲಾವಿದರು, ತಂತ್ರಜ್ಞರು, ಚಿತ್ರಸಾಹಿತಿಗಳು ಆಗಿಹೋಗಿದ್ದಾರೆ. ಅವರೆಲ್ಲರ ಸಾಧನೆಗಳನ್ನು ಮೆಲುಕು ಹಾಕುವುದು ಮತ್ತು ಇಂದಿನ ಹಾಗೂ ಮುಂದಿನ ದಿನಗಳ ಚಿತ್ರರಂಗದ ದಿಕ್ಕುದೆಸೆಗಾಗಿ ಅವರ ಸಾಧನೆಗಳನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳುವುದು ಇಂದಿನ ತುರ್ತಾಗಿದೆ. ಕನ್ನಡ ಚಿತ್ರರಂಗ ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯ. ಅಂತಹ ಹಲವು ವಿಚಾರಗಳನ್ನು, ಚಿಂತನೆಗಳನ್ನು, ಚಿಂತನೆಗಳನ್ನು ಇಲ್ಲಿ ಲೇಖಕರು ವಿಶದವಾಗಿ ಚರ್ಚೆಗೆ ಒಳಪಡಿಸಿದ್ದಾರೆ. ಇಲ್ಲಿ ಕೇವಲ ಚಿತ್ರರಂಗಕ್ಕೆ ಮಾತ್ರ ಸೀಮಿತವಾದ ವಿಚಾರಗಳಿಲ್ಲ. ಅವುಗಳಿಗೆ ಪೂರಕವಾದ ಚಿತ್ರಮಂದಿರಗಳ ಸಮಸ್ಯೆ, ಚಿತ್ರರಂಗ ಮತ್ತು ಕಾನೂನು, ಸಿನಿಮಾ ಪತ್ರಿಕೆಗಳು ಮುಂತಾದ ವಿಷಯಗಳ ಬಗ್ಗೆಯೂ ಲೇಖಕರು ಬಹಳಷ್ಟು ಒಳನೋಟಗಳನ್ನು ಒದಗಿಸಿದ್ದಾರೆ. ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಇದೊಂದು ಉಪಯುಕ್ತ ಗ್ರಂಥವಾಗಿದೆ.

About the Author

ಎನ್.ಎಸ್. ಶ್ರೀಧರಮೂರ್ತಿ
(24 August 1968)

ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು  'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...

READ MORE

Related Books