ಕನ್ನಡ ಕೈದೀವಿಗೆ

Author : ಕಲ್ಯಾಣರಾವ ಜಿ. ಪಾಟೀಲ

Pages 508

₹ 380.00




Year of Publication: 2014
Published by: ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ
Address: ಸೂಪರ್ ಬಜಾರ್, ಮುಖ್ಯರಸ್ತೆ, ಕಲಬುರಗಿ-585101

Synopsys

ಲೇಖಕರಾದ ಡಾ. ಕಲ್ಯಾಣರಾವ ಜಿ. ಪಾಟೀಲ ಮತ್ತು ಲಕ್ಷ್ಮೀಕಾಂತ ಸಿ. ಪಂಚಾಳ. ‘ಸಮಗ್ರ ಕನ್ನಡ : ವಸ್ತುನಿಷ್ಠ ಜ್ಞಾನಕೋಶ’ ಎಂದೇ ಕರೆದುಕೊಂಡಿದ್ದಾರೆ. ಈ ಕೃತಿಯು 2011ರಲ್ಲಿ ಮೊದಲ ಮುದ್ರಣ ಕಂಡಿತ್ತು. ಸುಮಾರು 20 ವರ್ಷಗಳ ನೆಟ್, ಜೆ.ಆರ್.ಎಫ್. ಹಾಗೂ ವಿವಿಧ ಕನ್ನಡ ಶಿಕ್ಷಕರ ಹುದ್ದಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನಾವಳಿಗಳನ್ನು ಎದುರಿಗೆ ಇಟ್ಟುಕೊಂಡು ತಯಾರಿಸಿದ ಒಂದು ಮಾಹಿತಿ ಕೋಶ ಇದಾಗಿದೆ” ಎಂದು ಇದಕ್ಕೆ ಮುನ್ನುಡಿ ಬರೆದಿರುವ ಡಾ. ವೀರಣ್ಣ ದಂಡೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಚರಿತ್ರೆ, ಭಾರತೀಯ ಕಾವ್ಯ ಮೀಮಾಂಸೆ, ಪಾಶ್ಚಾತ್ಯ ಕಾವ್ಯ ಮೀಮಾಂಸೆ, ಸಾಹಿತ್ಯ ವಿಮರ್ಶೆ, ಭಾಷಾ ವಿಜ್ಞಾನ, ವ್ಯಾಕರಣ, ಛಂದಸ್ಸು ಹೀಗೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ವ್ಯಾಪಕ ಮಾಹಿತಿಗಳನ್ನುನೀಡಲಾಗಿದೆ. 1991 ರಿಂದ 2011 ರವರೆಗಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕನ್ನಡ ಪ್ರಶ್ನೋತ್ತರ ಮಾಲಿಕೆಗಳಿವೆ. ಮೊರಾರ್ಜಿ ದೇಸಾಯಿ ಪ್ರೌಢ ಶಾಲೆ, ಸರಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ನೆಟ್, ಕೆ.ಎ.ಎಸ್. ಹುದ್ದೆಗಳಿಗೆ ಇತ್ತೀಚಿನ ವರ್ಷಗಳಲ್ಲಿ ನಡೆದ ಪರೀಕ್ಷಾ ಪ್ರಶ್ನೆಪತ್ರಿಕೆಗಳ ಮಾದರಿಗಳಿವೆ. ಹಿಂದುಳಿದ ವಿಭಾಗದಲ್ಲಿ ಸ್ಪರ್ಧಾತ್ಮಕವಾಗಿ ಯುವಕರನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಈ ಕೃತಿಯು ಒಂದು ಮಾದರಿ ಆಕರ ಗ್ರಂಥವಾಗಿದೆ. ಪ್ರೌಢಶಾಲೆಯಿಂದ ಪಿಯುಸಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬೋಧಕರಾಗ ಬಯಸುವವರಿಗೆ ಈ ಕೃತಿ ಆಕರ ಗ್ರಂಥ.

About the Author

ಕಲ್ಯಾಣರಾವ ಜಿ. ಪಾಟೀಲ

ಲೇಖಕ ಡಾ. ಕಲ್ಯಾಣರಾವ ಜಿ. ಪಾಟೀಲ ಅವರು ಮೂಲತಃ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಸೊಂತ ಸಮೀಪದ ಸರಪೋಷ್ ಕಿಣಗಿ ಗ್ರಾಮದವರು. ತಂದೆ- ಗುರುಪಾದಪ್ಪ ಮಾಲಿಪಾಟೀಲ, ತಾಯಿ- ಮಹಾದೇವಿಯಮ್ಮ. ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿ  ಹಾಗೂ ಹಿರಿಯ ಮಾಧ್ಯಮಿಕ ಶಿಕ್ಷಣವನ್ನು ಪಕ್ಕದೂರಾದ ಚೇಂಗಟಾದಲ್ಲಿ ಪೂರ್ಣಗೊಳಿಸಿದರು. ಪ್ರೌಢಶಾಲೆಯಿಂದ ಪದವಿಯವರೆಗೂ ಕಲಬುರಗಿಯ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಲ್ಲಿ ನಂತರ  ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದಿಂದ ಕಾಲೇಜಿಗೆ ಪ್ರಥಮ ಮತ್ತು ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಹತ್ತನೇ ರ್‍ಯಾಂಕಿನೊಂದಿಗೆ ಬಿ.ಎ. ಪದವಿ ಪಡೆದರು. ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಎರಡನೆಯ ರ್‍ಯಾಂಕಿನೊಂದಿಗೆ ಎಂ.ಎ ಪದವಿ ಹಾಗೂ ಮೂರನೇ ರ್‍ಯಾಂಕಿನೊಂದಿಗೆ ಎಂ.ಫಿಲ್ ಪದವಿ  ಹಾಗೂ ಡಾ. ಎಂ.ಎಂ. ...

READ MORE

Related Books