ಕನ್ನಡ ಕವಿಕಾವ್ಯ ಕುಸುಮ-42

Author : ಬಿ.ಆರ್. ಲಕ್ಷ್ಮಣರಾವ್

Pages 152

₹ 140.00




Year of Publication: 2019
Published by: ಚತುರ್ಮುಖ
Address: #43, ಕಲಾಮಂದಿರ
Phone: 9538038383

Synopsys

ಕನ್ನಡ ಕವಿ ಕಾವ್ಯ ಕುಸುಮ ಸರಣಿಯಲ್ಲಿ ಪ್ರಕಟವಾಗುತ್ತಿರುವ 42ನೇ ಕೃತಿ. ಬಿ.ಆರ್‌. ಲಕ್ಷ್ಮಣರಾವ್‌ ಮತ್ತು ಇಂದಿರಾ ಸುಂದರ್‌ ಅವರ ಈ ಸಂಕಲನದ ಕವಿತೆಗಳನ್ನು ಸಂಪಾದಿಸಿದ್ದಾರೆ. ಡಾ. ವಸಂತಕುಮಾರ ಪೆರ್ಲ, ಜಿ.ಕೆ. ರವೀಂದ್ರಕುಮಾರ್‌ ಮತ್ತು ಮೀನಾ ಮೈಸೂರು ಅವರ ಆಯ್ದ ಕವಿತೆಗಳನ್ನು ಈ ಸಂಕಲನ ಒಳಗೊಂಡಿದೆ. ಕನ್ನಡದ ಪ್ರಮುಖ ಕವಿತೆಗಳ ಪ್ರಾತಿನಿಧಿಕ ಕವಿತೆಗಳನ್ನು ಓದುಗರಿಗೆ ಒದಗಿಸುವುದು ಈ ಸರಣಿಯ ಉದ್ದೇಶ.

About the Author

ಬಿ.ಆರ್. ಲಕ್ಷ್ಮಣರಾವ್
(09 September 1946)

ಕವಿ, ಕತೆಗಾರ, ವಿಮರ್ಶಕ ಹಾಗೂ ಚಲನಚಿತ್ರಕಾರ ಬಿ.ಆರ್‌. ಲಕ್ಷ್ಮಣರಾವ್‌ ಅವರು 1946 ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಗಟ್ಟ ತಾಲ್ಲೂಕಿನ ಚೀಮಂಗಲದಲ್ಲಿ ಜನಿಸಿದರು. ತಂದೆ ರಾಜಾರಾವ್. ತಾಯಿ ವೆಂಕಟಲಕ್ಷ್ಮಮ್ಮ. ಚಿಂತಾಮಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ಚಿಂತಾಮಣಿಯ ಪ್ರೌಢಶಾಲೆ ಉಪಾಧ್ಯಾಯರಾಗಿ ವೃತ್ತಿ ಆರಂಭಿಸಿದ ಇವರು ವಿನಾಯಕ ಟುಟೋರಿಯಲ್ಸ್‌ನ ಪ್ರಿನ್ಸಿಪಾಲರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಸಂಪೂರ್ಣವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.  ಇವರು ಬರೆದ ಪ್ರಮುಖ ಕೃತಿಗಳೆಂದರೆ ಲಿಲ್ಲಿ ಪುಟ್ಟಿಯ ಹಂಬಲ, ಶಾಂಗ್ರಿ-ಲಾ, ಅಪರಾಧಂಗಳ ಮನ್ನಿಸೊ, ಗೋಪಿ ಮತ್ತು ...

READ MORE

Related Books