ಕನ್ನಡ ಸಾಹಿತ್ಯ ಚರಿತ್ರೆ

Author : ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ

Pages 464

₹ 315.00




Year of Publication: 2014
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004
Phone: 08026617100

Synopsys

ಕನ್ನಡ ಸಾಹಿತ್ಯಚರಿತ್ರೆ-ಈ ಕೃತಿಯನ್ನು ಕವಿ ಎನ್. ಎಸ್. ಲಕ್ಷ್ಮೀ ನಾರಾಯಣ ಭಟ್ಟರು ರಚಿಸಿದ್ದಾರೆ. ಕ್ರಿಪೂ. 3ನೇ ಶತಮಾನದ ಅಶೋಕನ ಪ್ರಾಕೃತ ಶಾಸನದಲ್ಲಿ ದೊರೆತಿರುವ `ಇಸಿಲ` ಎಂಬ ಕನ್ನಡ ಪದದ ಪ್ರಸ್ತಾಪದಿಂದ ಕ್ರಿ.ಶ. 20ನೇ ಶತಮಾನದವರೆಗಿನ ಪ್ರಾಚೀನ ಸಾಹಿತ್ಯಚರಿತ್ರೆ ಯನ್ನು ವಿವರಿಸಲಾಗಿದೆ. 2ನೇ ವಿಭಾಗದಲ್ಲಿ ಜಾನಪದ ಸಾಹಿತ್ಯವೂ ಸೇರ್ಪಡೆಯಾಗಿದೆ. 3ನೇ ವಿಭಾಗದಲ್ಲಿಆಧುನಿಕ ಸಾಹಿತ್ಯ ವಿಭಾಗದಲ್ಲಿ ಹೊಸಗನ್ನಡದ ಕಾವ್ಯ, ಕಾದಂಬರಿ, ನಾಟಕ, ಸಣ್ಣಕತೆ, ವಿಮರ್ಶೆ, ಸಂಶೋಧನೆ ಹೀಗೆ 14 ಉಪವಿಭಾಗಗಳ ವಿವರಗಳಿವೆ. ಯಕ್ಷಗಾನ ಸಾಹಿತ್ಯ ಮತ್ತು ಅಮೆರಿಕದಲ್ಲಿ ಕನ್ನಡ ಸಾಹಿತ್ಯ ಎಂಬ ಎರಡು ಹೊಸ ವಿಭಾಗಗಳೂ ಸೇರಿವೆ.

About the Author

ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
(29 October 1936 - 06 March 2021)

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಪ್ರೊ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರು. ಮೂಲತಃ ಶಿವಮೊಗ್ಗದವರಾದ ಅವರು ಸದ್ಯ ಬೆಂಗಳೂರು ನಗರದ ನಿವಾಸಿ. ಅವರ ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಅವರ ಪೂರ್ಣ ಹೆಸರು ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ಟ. ಅವರು ಕವಿ ಮಾತ್ರವಲ್ಲದೆ ವಿಮರ್ಶಕ ಹಾಗೂ ವಾಗ್ಮಿ. ಅವರ ಭಾವಗೀತೆಗಳು ಕ್ಯಾಸೆಟ್‌ಗಳ ಮೂಲಕಜನಪ್ರಿಯಗೊಂಡಿವೆ. ವೃತ್ತ, ಸುಳಿ, ನಿನ್ನೆಗೆ ನನ್ನ ಮಾತು, ದೀಪಿಕಾ ಮತ್ತು ಬಾರೋ ವಸಂತ (ಕವನ ಸಂಗ್ರಹಗಳು), ಹೊರಳು ದಾರಿಯಲ್ಲಿ ಕಾವ್ಯ (ವಿಮರ್ಶೆ), ಜಗನ್ನಾಥ ವಿಜಯ, ಮುದ್ರಾ ಮಂಜೂಷ, ಕರ್ಣ, ಕುಂತಿ, ಕನ್ನಡ ...

READ MORE

Related Books