ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 152

₹ 1.00




Year of Publication: 1950
Published by: ಆನಂದ ಬ್ರದರ್ಸ್ ಪ್ರಕಾಶನ
Address: ಬೆಂಗಳೂರು

Synopsys

ಚಿಂತಕ ಅ.ನ.ಕೃಷ್ಣರಾಯರು ಕನ್ನಡ ಸಾಡು-ನುಡಿ ಕುರಿತು ಬರೆದ ಪ್ರಬಂಧಗಳ ಸಂಕಲನ-ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ. ಒಣ ಅಭಿಮಾನದಿಂದ ಕನ್ನಡ ಸಾಹಿತ್ಯ ಬೆಳೆಯದು. ತುಲನಾತ್ಮಕ ದೃಷ್ಟಿಯಿಂದ ನಮ್ಮ ಸಾಹಿತ್ಯವು ಜಗತ್ತಿನ ಸಾಹಿತ್ಯದೊಡೆನೆ ಎಲ್ಲಿ ನಿಲ್ಲುತ್ತದೆ ಎಂಬುದನ್ನು ವಿಚಾರ ಮಾಡಬೇಕಿದೆ. ಸಾಹಿತ್ಯದಲ್ಲಿಎಷ್ಟೊಂದು ಅವಿನಾಶತ್ವ ಇದೆ ಎಂಬುದನ್ನು ತಿಳಿಯಬೇಕಿದೆ. ಇಲ್ಲಿ ಪ್ರಕಟವಾದ ಬಹುತೇಕ ಲೇಖನಗಳು ಮದರಾಸು ಆಕಾಶವಾಣಿಗಾಗಿ ಬರೆದವು. ಮತ್ತೆ ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಸಜೀವ ಸಾಹಿತ್ಯ-ಇದನ್ನು ಹುಬ್ಬಳ್ಳಿಯ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಮತ್ತು ಸಂಸ್ಕೃತಿ ಎಂದರೇನು? ಎಂಬ ಲೇಖನವು ದಾವಣಗೆರೆಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ಮಾಡಿದ ಅಧ್ಯಕ್ಷೀಯ ಭಾಷಣಗಳಾಗಿವೆ.

ಸಿಂಹಾವಲೋಕನ, ರಸಾನುಭವ, ಕನ್ನಡ ನಾಟಕ, ಕೈಲಾಸಂ, ಬಸವಣ್ಣನವರ ದರ್ಶನ ಹೀಗೆ ಒಟ್ಟು 10 ವಿದ್ವತ್ ಪೂರ್ಣ ಲೇಖನಗಳು ಇಲ್ಲಿ ಸಂಕಲನಗೊಂಡಿವೆ. ಇಲ್ಲಿರುವ ಲೇಖನಗಳು ಇಡೀ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸುತ್ತವೆ ಎಂದರ್ಥವಲ್ಲ. ಆದರೆ ಅವು ಪ್ರತಿನಿಧಿಸುತ್ತವೆ  ಎಂದೂ ಲೇಖಕರು ಹೇಳಿದ್ದಾರೆ.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books