ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗಳು ಮತ್ತು ನನ್ನ ಅವಲೋಕನದ ಮಾತುಗಳು

Author : ಸಂಗಮೇಶ ತಮ್ಮನಗೌಡ್ರ

Pages 80

₹ 50.00




Year of Publication: 2011
Published by: ನೀಲಾ ಪ್ರಕಾಶನ
Address: ಗುಜಮಾಗಡಿ, ತಾ: ರೋಣ, ಜಿ: ಗದಗ-582 102
Phone: 9449074397

Synopsys

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗಳು ಮತ್ತು ನನ್ನ ಅವಲೋಕನದ ಮಾತುಗಳು-ಈ ಕೃತಿಯು ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಆತ್ಮಚರಿತ್ರೆಯ 6ನೇ ಭಾಗವಾಗಿದೆ. ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದ (2016 ಫೆಬ್ರವರಿ) ಲೇಖಕರು, ಆ ಅನುಭವದ ಹಿನ್ನೆಲೆಯಲ್ಲಿ ಪರಿಷತ್ತು ಹೇಗೆ ತನ್ನ ಪ್ರಭಾವವನ್ನು ಮಸುಕಾಗಿಸಿಕೊಳ್ಳುತ್ತಿದೆ. ಪರಿಷತ್ ಸದಸ್ಯರು ಈ ಬಗ್ಗೆ ಎಷ್ಟು ಚಿಂತಿತರಾಗಿದ್ದಾರೆ? ಇತ್ಯಾದಿ ಚಿಂತನೆಗಳು ಮೂಡಿದ್ದು, ಈ ಎಲ್ಲ ಅಂಶಗಳು ತಮ್ಮ ಆತ್ಮಚರಿತ್ರೆ ಭಾಗ-6 ರಚನೆಗೆ ಕಾರಣ ಎಂದು ಲಖಕರು ಹೇಳಿದ್ದಾರೆ.

ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಾಗೂ 8 ತಿಂಗಳಳ್ಲಿ ನಾನು ಪಡೆದ ಅನುಭವಗಳು, ಸ್ವಾಮೀಜಿಗಳಿಗೇಕೆ ಕನ್ನಡ ಸಾಹಿತ್ಯ ಪರಿಷತ್ ರಾಜಕಾರಣ?, ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ನಾನು ಕಂಡಂತೆ ಕಾರ್ಯಕರ್ತರ ವಿಶ್ವಾಸದ ಕೊರತೆ, ಕನ್ನಡ ಸಾಹಿತ್ಯ ಪರಿಷತ್ತಿಗೆ ಒಬ್ಬ ಮಹಿಳಾ ಅಧ್ಯಕ್ಷರಾಗಿಲ್ಲವೇಕೆ? , ಸಾಹಿತಿಗಳಲ್ಲಿ ಗುಂಪುಗಾರಿಕೆ ಮತ್ತು ಸಾಮರಸ್ಯದ ಕೊರತೆ, ಸದಸ್ಯರಲ್ಲಿ ಕೆಲವರು ಮತ ಹಾಕಲು ಉದಾಸೀನ ತೋರುವರೇಕೆ? ಇಂತಹ ಹಲವು ಪ್ರಶ್ನೆಗಳ ಮೂಲಕ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಕಟ್ಟುವ ಬೆಳೆಸುವ ಚಿಂತನೆಗಳ ಸಂಗ್ರಹವಿದು.

About the Author

ಸಂಗಮೇಶ ತಮ್ಮನಗೌಡ್ರ
(15 January 1970)

ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...

READ MORE

Related Books