ಕನ್ನಡ ಸಾಹಿತ್ಯ ವಿಮರ್ಶೆ

Author : ಬಸವರಾಜ ಸಬರದ

Pages 42

₹ 20.00




Year of Publication: 2011
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ

Synopsys

‘ಕನ್ನಡ ಸಾಹಿತ್ಯ ವಿಮರ್ಶೆ’ ಕನ್ನಡ ವಿಶ್ವವಿದ್ಯಾಲಯವು ಕನ್ನಡದ ಹತ್ತಾರು ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಕುರಿತು ಸಾಮಾನ್ಯ ಓದುಗರಿಗೆ ಅರಿವನ್ನು ನೀಡಲು ಮಂಟಪ ಮಾಲೆಯಲ್ಲಿ ಪ್ರಕಟಿಸಿದ ಕಿರು ಪುಸ್ತಕಗಳಲ್ಲಿ ಇದೂ ಒಂದು. ಈ ಕೃತಿಯನ್ನು ಲೇಖಕ ಡಾ. ಬಸವರಾಜ ಸಬರದ ಸಂಪಾದಿಸಿದ್ದಾರೆ. ಈ ಕೃತಿಯಲ್ಲಿ ಪ್ರಾಸ್ತಾವಿಕ, ವಿಮರ್ಶೆಯ ಬೆಳವಣಿಗೆ, ವಿಮರ್ಶಾ ಘಟ್ಟಗಳು- ನವೋದಯ ವಿಮರ್ಶೆ, ನವ್ಯ ವಿಮರ್ಶೆ, ದಲಿತ-ಬಂಡಾಯ ವಿಮರ್ಶೆ, ಸ್ತ್ರೀವಾದಿ ವಿಮರ್ಶೆ ಹಾಗೂ ಸಮಾರೋಪ ಲೇಖನಗಳು ಸಂಕಲನಗೊಂಡಿವೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books