ಕನ್ನಡ ಸಾಹಿತ್ಯ ಪರಂಪರೆ ಮತ್ತು ಜನಪರತೆ

Author : ಪಿ. ವಿ. ನಾರಾಯಣ

Pages 222

₹ 170.00




Year of Publication: 2021
Published by: ವಸಂತ ಪ್ರಕಾಶನ
Address: # 360, 10ನೇ ಮುಖ್ಯ, ಬಿ- ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್ ಎದುರು, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011 Hours:
Phone: 0802244 3996

Synopsys

ಸಾಹಿತಿ ಡಾ. ಪಿ.ವಿ. ನಾರಾಯಣ ಅವರು ರಚಿಸಿದ ಕೃತಿ-ಕನ್ನಡ ಸಾಹಿತ್ಯ ಪರಂಪರೆ ಮತ್ತು ಜನಪರತೆ. ಕನ್ನಡ ಸಾಹಿತ್ಯಕ್ಕಿರುವ ಸಾವಿರಾರು ವರ್ಷಗಳ ಪರಂಪರೆಯ ಇತಿಹಾಸವನ್ನು ಚರ್ಚಿಸಲಾಗಿದ್ದು, ಜನ ಎಂದರೆ ಸಾಮಾನ್ಯ ಜನತೆ; ಅದರ ಅಂತರಂಗ-ಆಕಾಂಕ್ಷೆ-ತವಕ-ತಲ್ಲಣ-ನಿರೀಕ್ಷೆ-ಜೀವನ ಸ್ವರೂಪ ಹಾಗೂ ಜೀವನದರ್ಶನಗಳನ್ನು ಒಳಗೊಳ್ಳುವುದೇ ಜನಪರತೆ ಎಂದು ಲೇಖಕರು ಹೇಳುತ್ತಾರೆ. ಹೀಗೆ ಜನಪರತೆ ಹಾಗೂ ಕನ್ನಡ ಸಾಹಿತ್ಯ ಪರಂಪರೆಯನ್ನು ತೌಲನಿಕವಾಗಿ ಅಧ್ಯಯನ ನಡೆಸಿ ವಿಶ್ಲೇಷಣೆಗೆ ಒಳಪಡಿಸಿದ್ದೇ ಈ ಕೃತಿ. ಕನ್ನಡ ಸಾಹಿತ್ಯ ಪರಂಪರೆಯನ್ನು ಮೊದಲ ಅವರು ಕವಿರಾಜ ಮಾರ್ಘದಿಂದ ಆರಂಭಿಸುತ್ತಾರೆ. ನಂತರದ ಸಾಹಿತ್ಯದ ಮಾರ್ಗಗಳನ್ನು ಗುರುತಿಸಿ, ವಿಶ್ಲೇಷಿಸುತ್ತಾ ಹೋಗುವುದು ಈ ಕೃತಿಯ ವೈಶಿಷ್ಟ್ಯ.

About the Author

ಪಿ. ವಿ. ನಾರಾಯಣ
(18 December 1942)

ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.  ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ  ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...

READ MORE

Related Books