ಕನ್ನಡ ವ್ಯಾಕರಣ ದೀಪ್ತಿ

Author : ಸಂಗಮೇಶ ತಮ್ಮನಗೌಡ್ರ

Pages 80

₹ 25.00




Year of Publication: 2011
Published by: ನೀಲಾ ಪ್ರಕಾಶನ
Address: ಗುಜಮಾಗಡಿ, ತಾ: ರೋಣ, ಜಿ: ಗದಗ-582 102
Phone: 9449074397

Synopsys

ಪ್ರಬಂಧ ಬರೆಹ, ಛಂದಸ್ಸು, ಸಂಧಿ, ಸಮಾಸ, ಪತ್ರ ಬರೆಹ, ಅಲಂಕಾರ ಇತ್ಯಾದಿ ಕುರಿತಂತೆ ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಬರೆದಿರುವ ವ್ಯಾಕರಣ ಮಾಹಿತಿಯ ಪುಸ್ತಕ-ಕನ್ನಡ ವ್ಯಾಕರಣ ದೀಪ್ತಿ. ವಿದ್ಯಾರ್ಥಿಗಳ ಭಾಷಾ ಶುದ್ಧೀಕರಣವನ್ನೇ ಗುರಿಯಾಗಿಸಿಕೊಂಡು ಬರೆದ ಕೃತಿ ಇದು.

ಶಿರಹಟ್ಟಿ ತಾಲೂಕಿನ ರಾಮಗಿರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ (2011) ನಡೆದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳ ವ್ಯಾಕರಣ ಶುದ್ಧಿಕರಣ ಕುರಿತಂತೆ ಚರ್ಚೆ ನಡೆಯಿತು. ಈ ಕಾರ್ಯಾಗಾರದ ಪ್ರೇರಣೆಯಿಂದ ಮಕ್ಕಳಿಗಾಗಿ ಕನ್ನಡ ವ್ಯಾಕರಣದ ಸರಳ ಕೃತಿ ರಚನೆಯ ಅಗತ್ಯತೆಯನ್ನು ಮನಗಂಡಿದ್ದರ ಫಲವೇ ಈ ಕೃತಿ ಎಂದು ಲೇಖಕರು ಹೇಳಿದ್ದಾರೆ.

About the Author

ಸಂಗಮೇಶ ತಮ್ಮನಗೌಡ್ರ
(15 January 1970)

ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...

READ MORE

Related Books