ಕನ್ನಡ ವ್ಯಾಕರಣ ಯಾಕೆ ಬೇಕು?

Author : ಡಿ.ಎನ್. ಶಂಕರ ಬಟ್

Pages 260

₹ 150.00




Year of Publication: 2009
Published by: ಬಾಶಾ ಪ್ರಕಾಶನ
Address: ಡಿ.ಎನ್.ಶಂಕರ್ ಬಟ್, ಅಂಚೆ : ಬಿ.ಮಂಚಾಲೆ, ಸಾಗರ ೫೭೭ ೪೩೧

Synopsys

ಕನ್ನಡದಲ್ಲಿ ಓದಲು-ಬರೆಯಲು ಕಲಿಯುವುದು, ಇಂಗ್ಲಿಷ್‌ನಂತಹ ಬೇರೆ ನುಡಿಗಳನ್ನು ಕಲಿಯುವುದು, ಕನ್ನಡದಿಂದ ಬೇರೊಂದು ನುಡಿಗೆ ಇಲ್ಲವೇ ಬೇರೊಂದು ನುಡಿಯಿಂದ ಕನ್ನಡಕ್ಕೆ ಅನುವಾದಿಸುವುದು ಮೊದಲಾದ ನುಡಿಗೆ ಸಂಬಂಧಿಸಿದಂತಹ ಹಲವಾರು ಕೆಲಸಗಳನ್ನು ನಡೆಸುವಲ್ಲಿ ಕನ್ನಡ ವ್ಯಾಕರಣ ನೆರವು ಕೊಡಬಲ್ಲುದು ಎಂಬುದನ್ನು ಈ ಪುಸ್ತಕದಲ್ಲಿ ತೋರಿಸಿಕೊಡಲಾಗಿದೆ. ಅದರ ಮೊದಲ ಭಾಗವಾಗಿ ಕನ್ನಡ ವ್ಯಾಕರಣ ಎಂತಹುದು ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ.  ಈ ನಿಟ್ಟಿನಲ್ಲಿ ಈ ಕೃತಿಯು ಅದಕ್ಕೆ ನೆರವಾಗಲಿದೆ. 

About the Author

ಡಿ.ಎನ್. ಶಂಕರ ಬಟ್

ಹಿರಿಯ ಲೇಖಕ ಡಿ.ಎನ್. ಶಂಕರ ಬಟ್ ಅವರು ಅಂತಾರಾಷ್ಟ್ರೀಯ ಖ್ಯಾತಿಯ ಭಾಷಾಶಾಸ್ತ್ರಜ್ಞರು. ಮದ್ರಾಸ್ ವಿಶ್ವವಿದ್ಯಾಲಯದಿಂದ  ಸಂಸ್ಕೃತದಲ್ಲಿ ಸ್ನಾತಕ್ಕೋತ್ತರ ಪದವೀಧರರು.  ಪುಣೆ ವಿಶ್ವವಿದ್ಯಾಲಯದಿಂದ ನುಡಿಯರಿಮೆ(linguistics)ಯಲ್ಲಿ ಪಿ.ಎಚ್.ಡಿ.ಪದವೀಧರರು. ಅಮೇರಿಕಾದ ಸ್ಟ್ಯಾನ್ಪೋರ್‍ಡ್ ಯುನಿವರ್‍ಸಿಟಿ, ಆಸ್ಟ್ರೇಲಿಯಾದ ಲಾ ಟ್ರೋಬೆ ಯುನಿವರ್‍ಸಿಟಿ, ಬೆಲ್ಜಿಯಂ ದೇಶದ ಆಂಟ್ವೆರ್‍ಪ್ ಯುನಿವರ್‍ಸಿಟಿ, ಜರ್‍ಮನಿಯ ಮ್ಯಾಕ್ಸ್ ಪ್ಲಾಂಕ್ ಇನ್ಸ್ಟಿಟ್ಯೂಟ್‍ನಂತಹ ಜಗತ್ತಿನ ಹಲವಾರು ಮುಂಚೂಣಿಯ ವಿಶ್ವವಿದ್ಯಾಲಯಗಳಲ್ಲಿ ಮತ್ತು ಮಯ್ಸೂರಿನಲ್ಲಿರುವ ಬಾರತೀಯ ಬಾಶಾ ಸಂಸ್ತಾನ, ಮಣಿಪುರ ವಿಶ್ವವಿದ್ಯಾಲಯ, ಪುಣೆಯಲ್ಲಿರುವ ಡೆಕ್ಕನ್ ಕಾಲೇಜ್ ಮುಂತಾದೆಡೆ ಕಲಿಸುಗರಾಗಿ, ಅರಕೆಗಾರರಾಗಿ ಕೆಲಸ ಮಾಡಿದ್ದಾರೆ. ನುಡಿಯರಿಮೆಯ ಸುತ್ತ ಬರೆದಿರುವ ಅವರ ಹತ್ತಾರು ಹೊತ್ತಗೆಗಳು ಮತ್ತು ಅರಕೆಯ ಪೇಪರಗಳು (research papers) ಜಗತ್ತಿನೆಲ್ಲೆಡೆ ...

READ MORE

Related Books