ಕಣ್ಣೀರು

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 128

₹ 70.00




Year of Publication: 2008
Published by: ಸಾಗರ್ ಪ್ರಕಾಶನ
Address: ಬನಶಂಕರಿ ಒಂದನೆಯ ಹಂತ, ಬೆಂಗಳೂರು
Phone: 9448494632

Synopsys

'ಕಣ್ಣೀರು' ಇಪ್ಪತ್ತನೇ ಶತಮಾನದ ಪೂರ್ವಾರ್ಧದಲ್ಲಿ ಅನಕೃ ಬರೆದ ಕಾದಂಬರಿ. ಕಾಲಧರ್ಮದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಅಂದಿನ ದಿನಗಳಲ್ಲಿ ಕೌಟುಂಬಿಕ ವ್ಯವಸ್ಥೆ ಹೀಗೆಲ್ಲಾ ಇತ್ತೇ? ಎಂಬ ಪ್ರಶ್ನೆಯೊಂದಿಗೆ, ಆಶ್ಚರ್ಯವೂ ಜೊತೆ ಜೊತೆಗೆ ಆಗುತ್ತದೆ. ಪ್ರಗತಿಶೀಲ ಸಾಹಿತಿ ಅ ನ ಕೃ ಅವರಿಗೆ ಜೀವನ ಹಸನಾಗಿ, ಬಾಳು ಸಹ್ಯವಾಗಿ, ಮಾನವನಿಗೆ ನಿಜಾತ್ಮದ ಅರಿವು ಮೂಡಬೇಕೆಂಬ ಗಹನ ಉದ್ದೇಶವಿದ್ದುದರಿಂದಲೇ ಉದಾತ್ತ ಜೀವನದ ಚಿತ್ರಣವನ್ನೇ ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books