ಕರ್ಮ ಸಿದ್ಧಾಂತ

Author : ಬಸವರಾಜ ಸಬರದ

Pages 54

₹ 2.00




Year of Publication: 2000
Published by: ಪ್ರಸಾರಾಂಗ
Address: ಗುಲಬರ್ಗಾ ವಿಶ್ವವಿದ್ಯಾಲಯ, ಗುಲಬರ್ಗಾ

Synopsys

‘ಕರ್ಮ ಸಿದ್ಧಾಂತ’ ಡಾ.ಬಸವರಾಜ ಸಬರದ ಅವರ ಉಪನ್ಯಾಸದ ಪಠ್ಯರೂಪ. 30-01-1998 ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಸಾರಾಂಗವು, ರಾಯಚೂರ ಜಿಲ್ಲೆಯ ಬೆಟ್ಟದೂರ ಗ್ರಾಮದಲ್ಲಿ ಏರ್ಪಡಿಸಿದ್ದ ಪ್ರಚಾರೋಪನ್ಯಾಸ ಮಾಲೆಯಲ್ಲಿ ನೀಡಿದ ಉಪನ್ಯಾಸವಿದು ಎಂದಿದ್ದಾರೆ ಬಸವರಾಜ ಸಬರದ. ಕರ್ಮಸಿದ್ಧಾಂತದ ಕುರಿತಂತೆ ಭಾರತೀಯ ಧರ್ಮಗಳಲ್ಲಿ ವಿವಿಧ ರೀತಿಯ ಪ್ರತಿಕ್ರಿಯೆಗಳಿವೆ. ಅವೆಲ್ಲವುಗಳನ್ನು ಸೂಕ್ಷ್ಮವಾಗಿ ಸಮೀಕ್ಷಿಸಿ ಕೊನೆಯಲ್ಲಿ ತೌಲನಿತ ವಿವೇಚನೆ ನಡೆಸಿದ್ದೇನೆ. ಇಂತಹ ಕೃತಿಯೊಂದು ಸಾಮಾನ್ಯ ಓದುಗರಲ್ಲಿ ತಿಳುವಳಿಕೆಯನ್ನುಂಟು ಮಾಡಿದರೆ ಈ ಬರವಣಿಗೆಯ ಶ್ರಮ ಸಾರ್ಥಕವೆಂದು ಭಾವಿಸುತ್ತೇನೆ ಎಂದಿದ್ದಾರೆ ಲೇಖಕ ಬಸವರಾಜ ಸಬರದ. ಕೃತಿಯಲ್ಲಿ ಪ್ರಸ್ತಾವನೆ, ಉಪನಿಷತ್ತುಗಳು, ಪುರಾಣಗಳು, ಭಗವದ್ಗೀತೆ, ಮನು ಸಂಹಿತೆ, ಲೋಕಾಯತ, ಜೈನ ಧರ್ಮ, ಬೌದ್ಧ ಧರ್ಮ, ಇತರ ಧರ್ಮಗಳು, ಶರಣರ ದೃಷ್ಟಿ ಹಾಗೂ ಸಮಾರೋಪ ಸಂಕಲನಗೊಂಡಿವೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books