ಕರ್ನಾಟಕ ಏಕೀಕರಣ ಇತಿಹಾಸ

Author : ಎಚ್.ಎಸ್. ಗೋಪಾಲರಾವ್

Pages 540

₹ 400.00




Year of Publication: 2005
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ಕನ್ನಡ ಮಾತನಾಡುವ ಭಾಷಿಕರನ್ನು ಒಂದು ಆಡಳಿತ ವ್ಯಾಪ್ತಿಗೆ ತಂದದ್ದು 1956ರಲ್ಲಿ. ಭಾಷಾವಾರು ಪ್ರಾಂತ್ಯ ರಚನೆಗೆ ನಡೆದ ಹೋರಾಟವನ್ನು ಕರ್ನಾಟಕದ ಏಕೀಕರಣದ ಹೋರಾಟ ಎಂದು ಗುರುತಿಸಲಾಗುತ್ತದೆ. ವಿವಿಧ ಆಡಳಿತಗಳಲ್ಲಿ ಹಂಚಿಹೋಗಿದ್ದ ಕನ್ನಡ ಭಾಷಿಕರನ್ನು 1956ರ ನವೆಂಬರ್‌ 1ರಂದು ಒಂದೆಡೆ ಸೇರಿ ’ಮೈಸೂರು’ ರಾಜ್ಯ ಸ್ಥಾಪನೆಯಾಯಿತು. ಮುಖ್ಯಮಂತ್ರಿ ದೇವರಾಜ ಅರಸು ಅವರು 1973ರಲ್ಲಿ 'ಕರ್ನಾಟಕ' ಎಂದು ನಾಮಕರಣ ಮಾಡಿದರು.

’ಕನ್ನಡ ನಾಡು’ ಮೂಡಿ ಬರಲು ನಡೆದ ಹೋರಾಟ, ಅದರ ಹಿಂದಿರುವ ಸೋಲು-ಗೆಲುವುಗಳ ಕತೆಯನ್ನು ಇತಿಹಾಸಕಾರ ಎಚ್‌.ಎಸ್‌. ಗೋಪಾಲರಾವ್‌ ಅವರು ಈ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಕರ್ನಾಟಕದ ಏಕೀಕರಣಕ್ಕಾಗಿ ನಡೆದ ಹೋರಾಟದ ಎಲ್ಲ ಹಂತಗಳನ್ನು, ಏಕೀಕರಣವಾದಾಗ ಪಡೆದದ್ದು, ಕಳೆದುಕೊಂಡದ್ದನ್ನು ಎಳೆ ಎಳೆಯಾಗಿ ಬಿಚ್ಚಿಡುವ ಈ ಹೊತ್ತಿಗೆಯಿದು.  ಸಮರ್ಥ ಕರ್ನಾಟಕ ತಲೆ ಎತ್ತಲು ನಾವು ನಮ್ಮ ಇತಿಹಾಸ ತಿಳಿಯುವ ಪ್ರಯತ್ನ ಈ ಕೃತಿಯಲ್ಲಿದೆ.

About the Author

ಎಚ್.ಎಸ್. ಗೋಪಾಲರಾವ್
(18 November 1946)

ಡಾ. ಎಚ್.ಎಸ್. ಗೋಪಾಲರಾವ್  ಅವರು 1946ರ ನವೆಂಬರ್‌ 18ರಂದು ನೆಲಮಂಗಲ ತಾಲ್ಲೂಕಿನ ಹುಲ್ಲೇಗೌಡನ ಹಳ್ಳಿಯಲ್ಲಿ ಜನಿಸಿದರು. ಎಲೆಕ್ಟ್ರಿಕಲ್ ಇಂಜನಿಯರಿಂಗ್ ಡಿಪ್ಲೊಮ ಮುಗಿಸಿ ನಂತರ ಅವರು ಮೈಸೂರು ವಿವಿ ಕನ್ನಡ ಎಂ.ಎ. (1984- ಎರಡು ಚಿನ್ನದ ಪದಕ) ಪದವಿ ಪಡೆದರು.  ಶಾಸನಗಳ ಹಿನ್ನೆಲೆಯಲ್ಲಿ ಕಲ್ಯಾಣ ಚಾಲುಕ್ಯ ದೇವಾಲಯಗಳು ಒಂದು ಸಾಂಸ್ಕೃತಿಕ ಅಧ್ಯಯನ ಕುರಿತು ಪಿಎಚ್. ಡಿ.  ಪದವಿ ಪಡೆದರು. (ಮೈಸೂರು ವಿ ವಿ 1991). ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್, ಕೆಪಿಟಿಸಿಎಲ್ ನಿಯಮಿತ, (ಕನ್ನಡ ಸಮನ್ವಯಾಧಿಕಾರಿಯಾಗಿ) ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಾಸನ ಶಾಸ್ತ್ರ ಬೋಧಕರಾಗಿ ಕೆಲಸ ನಿರ್ವಹಿಸಿದ್ದಾರೆ.  ಜೇನು ನಂಜು, ...

READ MORE

Related Books