ಕರ್ನಾಟಕ “ನಾಡಗೀತೆ” : ಒಂದು ವಿಶ್ಲೇಷಣೆ

Author : ಎಂ. ಚಿದಾನಂದಮೂರ್ತಿ

Pages 56

₹ 10.00




Year of Publication: 2010
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

1956ರಲ್ಲಿ ರಾಜ್ಯ ಏಕೀಕರಣಗೊಂಡ ನಂತರ ಕರ್ನಾಟಕ ಸರ್ಕಾರ ಕುವೆಂಪು ಅವರ ಜನ್ಮಶತಮಾನೋತ್ಸವದ ನೆನಪಿಗಾಗಿ 2003ರಲ್ಲಿ ಅವರ ಕವನ ‘ಜಯ ಭಾರತ ಜನನಿಯ ತನುಜಾತೆ’ಯನ್ನು ‘ನಾಡಗೀತೆ’ ಎಂದು ಘೋಷಿಸಲಾಯಿತು. ಕುವೆಂಪು ವಿರಚಿತ ನಾಡಗೀತೆಯಲ್ಲಿ ಬರುವ ಅನೇಕ ವ್ಯಕ್ತಿ, ವಿಷಯಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿ ಇಲ್ಲದೆ ಇದ್ದದ್ದು ಇದೊಂದು ದೊಡ್ಡ ಸವಾಲಾಗಿ ಪರಿಣಮಿಸಿತು ಮತ್ತು ದೊಡ್ಡ ಕೊರತೆಯಾಗಿತ್ತು. ನಾಡಗೀತೆಯನ್ನು ಮೆಚ್ಚುವ ಇಲ್ಲಿನ ಅನೇಕ ಜನರಿಗೆ ಇಲ್ಲಿ ಬರುವ ಋಷಿಗಳು, ರಾಜರುಗಳ ಬಗ್ಗೆ ಇಲ್ಲಿಯ ಜನರಿಗೆ ಸಮಗ್ರ ತಿಳುವಳಿಕೆಯ ಕೊರತೆ ಇದೆ ಎಂಬುದನ್ನು ಮನಗಂಡ ಹಿರಿಯ ಸಂಶೋಧಕ “ಎಂ.ಚಿದಾನಂದ ಮೂರ್ತಿ”ಯವರು ಅವುಗಳನ್ನು ಈ ಕೃತಿಯಲ್ಲಿ ಪರಿಚಯಿಸಿದ್ದಾರೆ.

About the Author

ಎಂ. ಚಿದಾನಂದಮೂರ್ತಿ
(10 May 1931)

ಹಿರಿಯ ಸಾಹಿತಿ - ಸಂಶೋಧಕರಾದ ಎಂ. ಚಿದಾನಂದ ಮೂರ್ತಿ ಅವರು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರಿನಲ್ಲಿ ಜನಿಸಿದರು. ತಂದೆ ಕೊಟ್ಟೂರಯ್ಯ ಮತ್ತು ತಾಯಿ ಪಾರ್ವತಮ್ಮ. 1931ರ ಮೇ 10 ರಂದು ಜನಿಸಿದ ಅವರು ನೀತಿಗೆರೆ, ಹಿರೇಕೋಗಲೂರು, ಸಂತೇಬೆನ್ನೂರುಗಳಲ್ಲಿ ತಮ್ಮ ವಿದ್ಯಾಭ್ಯಾಸವನ್ನು ನಡೆಸಿದರು. ನಂತರ ದಾವಣಗೆರೆಯಲ್ಲಿ ಪ್ರೌಢಶಾಲೆ-ಇಂಟರ್ ಮೀಡಿಯಟ್ ಶಿಕ್ಷಣ (1950) ಮುಗಿಸಿ, ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಬಿ.ಎ. (ಆನರ್ಸ್) ಪದವಿ (1953) ಪಡೆದರು. ಅಧ್ಯಾಪಕರಾಗಿ ನೇಮಕಗೊಂಡರು. ನಂತರ ಎಂ. ಎ. ಪದವಿ (1957) ಪ್ರಥಮ ರ್‍ಯಾಂಕ್‌ನೊಂದಿಗೆ ಗಳಿಸಿದರು. 'ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ' ಎಂಬ ...

READ MORE

Related Books