ದುರ್ಗಸಿಂಹ ವಿರಚಿತ ಕರ್ನಾಟಕ ಪಂಚತಂತ್ರಂ

Author : ಪಿ. ವಿ. ನಾರಾಯಣ

Pages 298

₹ 150.00




Year of Publication: 2012
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560105
Phone: 080-22107807

Synopsys

ಕಥೆಗಳ ರೂಪದಲ್ಲಿ ನೀತಿ ಬೋಧನೆಯನ್ನು, ರಾಜಧರ್ಮವನ್ನು ಮತ್ತು ಪ್ರಜಾಧರ್ಮವನ್ನು ಬೋಧಿಸುವ ಪಂಚತಂತ್ರಗಳು ವಿವಿಧ ಕಾಲಘಟ್ಟದಲ್ಲಿ ಬೇರೆ ಬೇರೆ ಲೇಖಕರಿಂದ ರಚನೆಗೊಂಡಿತು. ಆದರೆ ಅವುಗಳಲ್ಲೆಲ್ಲ ದಕ್ಷಿಣ ಭಾರತದಲ್ಲಿ ಪ್ರಸಿದ್ಧವಾದ ದುರ್ಗಸಿಂಹ ಪಂಚತಂತ್ರ ಕಥೆಗಳು ವಸುಭಾಗ ಪಂಚತಂತ್ರದ ಕತೆಗಳ ಕನ್ನಡ ಛಾಯೆಯಂತೆ ಗೋಚರವಾಗುತ್ತದೆ. ಈ ಕೃತಿಯೂ ದಕ್ಷಿಣ ಭಾರತದಲ್ಲಿ ಮಹತ್ವಪೂರ್ಣವಾಗಿ ಮೂಡಿಬರುವುದರ ಜೊತೆಗೆ ಪ್ರಸಿದ್ಧಿಯನ್ನು ಪಡೆದಿದೆ. ಭಾರತ ಮಾತ್ರವಲ್ಲದೆ ಪ್ರಪಂಚದಾದ್ಯಂತ 90 ಪಂಚತಂತ್ರದ ಪರಿಷ್ಕರಣಗಳಿವೆ ಎಂದು ಅಂದಾಜಿಸಲಾಗಿದೆ. ದುರ್ಗಸಿಂಹನ ಪಂಚತಂತ್ರ ಕಥೆಗಳ ಮೂಲಕೃತಿಯನ್ನು ಆಧರಿಸಿ ಡಾ. ಪಿ.ವಿ. ನಾರಾಯಣರು ಈ ಅಪೂರ್ವವಾಗಿ ಈ ಕೃತಿಯನ್ನು ರಚಿಸಿದ್ದಾರೆ.

About the Author

ಪಿ. ವಿ. ನಾರಾಯಣ
(18 December 1942)

ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.  ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ  ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...

READ MORE

Related Books