ಕರ್ತಾರನ ಕಮ್ಮಟ

Author : ಎಚ್‌. ತಿಪ್ಪೇರುದ್ರಸ್ವಾಮಿ

Pages 918

₹ 300.00




Year of Publication: 2010
Published by: ಶ್ರೀಸಿದ್ಧಗಂಗಾ ಪ್ರಕಾಶನ

Synopsys

ಹನ್ನೆರಡನೆಯ ಶತಮಾನದ ವಚನ ಚಳವಳಿಯ ವಸ್ತುವನ್ನಾಗಿ ಇಟ್ಟುಕೊಂಡು ರಚಿತವಾದ ಕಾದಂಬರಿ ’ಕರ್ತಾರನ ಕಮ್ಮಟ’. ಬಸವಣ್ಣನವರ ವಚನದ ಮರ್ತ್ಯವೆಂಬುದು ಕರ್ತಾರನ ಕಮ್ಮಟ ಎಂಬ ಸಾಲು ಆಧರಿಸಿ ಶೀರ್ಷಿಕೆ ಇಡಲಾಗಿದೆ. ಬಸವಣ್ಣ, ಅಲ್ಲಮ, ಅಕ್ಕ ಈ ಕಾದಂಬರಿಯಲ್ಲಿ ಪ್ರಮುಖವಾಗಿದ್ದರೂ ಇಡೀ ಕಾದಂಬರಿಯ ಕೇಂದ್ರ ಮಾತ್ರ ಬಸವಣ್ಣ. ಬಸವಣ್ಣನ ಬದುಕನ್ನು ಕಾದಂಬರಿಯಲ್ಲಿ ಕಟ್ಟಿಕೊಡುವ ಪ್ರಯತ್ನವನ್ನು ತಿಪ್ಪೇರುದ್ರಸ್ವಾಮಿ ಅವರು ಮಾಡಿದ್ದಾರೆ. 

About the Author

ಎಚ್‌. ತಿಪ್ಪೇರುದ್ರಸ್ವಾಮಿ
(03 February 1928 - 28 October 1994)

ಶರಣರನ್ನು ಕುರಿತು ಕಾದಂಬರಿ ರಚಿಸುವ ಮೂಲಕ ಜನಪ್ರಿಯರಾಗಿರುವ ಎಚ್. ತಿಪ್ಪೇರುದ್ರಸ್ವಾಮಿ ಅವರು ಕರ್ನಾಟಕದ ಸಂಸ್ಕೃತಿಯ ಬಗ್ಗೆ ಆಳವಾದ ಅಧ್ಯಯನ ನಡೆಸಿದವರು. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿಯವರಾದ ತಿಪ್ಪೇರುದ್ರಸ್ವಾಮಿ ಜನಿಸಿದ್ದು 1928ರ ಫೆಬ್ರುವರಿ 3ರಂದು. ತಂದೆ ಚೆನ್ನಮಲ್ಲಯ್ಯ, ತಾಯಿ ಬಸಮ್ಮ. ಹೊನ್ನಾಳಿ, ಶಿರಾಳಕೊಪ್ಪ ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಆರಂಭಿಕ ಶಿಕ್ಷಣ ಪಡೆದ ತಿಪ್ಪೇರುದ್ರಸ್ವಾಮಿ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಚಿನ್ನದ ಪದಕದೊಂದಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ (ಎಂ.ಎ.) ಪಡೆದರು. ಶರಣರ ಅನುಭಾವ ಪ್ರಪಂಚ ಮಹಾಪ್ರಬಂಧಕ್ಕೆ ಡಾಕ್ಟೊರೇಟ್‌ ಪದವಿ (1962) ಪಡೆದರು. ಹಾಸನದ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ ತಿಪ್ಪೇರುದ್ರಸ್ವಾಮಿ ...

READ MORE

Related Books