ಕಷ್ಟ ಮನಸ್ಸಿಗೆ ಕಾಯಿಲೆ ದೇಹಕ್ಕೆ

Author : ಸಿ.ಆರ್. ಚಂದ್ರಶೇಖರ್

Pages 100

₹ 55.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 08022161900

Synopsys

ನಮ್ಮ ಮನಸ್ಸು ಬಹಳ ಸೂಕ್ಷ್ಮವೂ, ಅಷ್ಟೇ ಕಠಿಣವು ಹೌದು. ಆದರೆ ಮನಸ್ಸು ಏರುಪೇರಾದರೆ ಕಾಯಿಲೆ ಕಾಣಿಸಿಕೊಳ್ಳುವುದು ದೇಹಕ್ಕೂ ಅಂಟುತ್ತದೆ. ಮನೆಯಲ್ಲಿ ಜಗಳ, ಪತ್ನಿಯೊಂದಿಗೆ ವಿರಸ, ಸಹೋದ್ಯೋಗಿಗಳೊಂದಿಗೆ ಮನಸ್ತಾಪಗಳೆಲ್ಲದರ ಪರಿಣಾಮವಾಗಿ ತಲೆನೋವು ಹೆಚ್ಚುತ್ತದೆ. ಪರೀಕ್ಷೆಯ ಭಯ, ತತ್ಪರಿಣಾಮವಾಗಿ ವಾಂತಿ ಭೇದಿ ಕಾಣಿಸಿಕೊಳ್ಳುತ್ತದೆ. ಇಂತಹ ಮಾನಸಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮಾಹಿತಿಯನ್ನು ಈ ಪುಸ್ತಕ ಒದಗಿಸುತ್ತದೆ. ದೀರ್ಘಕಾಲದ ಮಾನಸಿಕ ಒತ್ತಡ ಎದುರಿಸುವುದು ಹೇಗೆ? ಮುಂತಾದ ಮಾನಸಿಕ ಆರೋಗ್ಯದ ಕುರಿತು ಈ ಕೃತಿ ವಿವರಿಸುತ್ತದೆ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books