‘ಕಥಾವಸಂತ’ 2018ರ ಯುಗಾದಿ ಹಬ್ಬದ ಪ್ರಯುಕ್ತ ವಿಜಯ ಕರ್ನಾಟಕ ಪತ್ರಿಕೆ ಏರ್ಪಡಿಸಿದ್ದ ಕಥಾಸ್ಪರ್ಧೆಗೆ ಬಂದಿರುವ ಪೈಕಿ ಆಯ್ದ ಉತ್ತಮ 25 ಕಥೆಗಳ ಸಂಕಲನ. ಪತ್ರಕರ್ತೆ ವಿದ್ಯಾರಶ್ಮಿ ಪೆಲತ್ತಡ್ಕ ಹಾಗೂ ಇತರೆ ಸಹೋದ್ಯೋಗಿಗಳು ಸಂಪಾದಿಸಿರುವ ಈ ಕೃತಿಗೆ ಚಿತ್ರ ನಿರ್ದೇಶಕ ಯೋಗರಾಜ್ ಭಟ್ ಬೆನ್ನುಡಿ ಬರೆದಿದ್ದಾರೆ. ಈ ಕೃತಿಯಲ್ಲಿ ಹಿರಿಕಿರಿಯ ಕಥೆಗಾರರ 25 ಕಥೆಗಳಿವೆ.
ವಿದ್ಯಾರಶ್ಮಿ ಪೆಲತ್ತಡ್ಕ- ದಕ್ಷಿಣ ಕನ್ನಡ-ಕಾಸರಗೋಡು ಗಡಿ ಭಾಗದ ಪೆಲತ್ತಡ್ಕದವರು. ಮಂಗಳೂರು ವಿವಿಯಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. ಕನ್ನಡ ಪ್ರಭ, ಸುವರ್ಣ ನ್ಯೂಸ್, ವಿಜಯ ನೆಕ್ಸ್ಟ್ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ. ಸದ್ಯ ವಿಜಯ ಕರ್ನಾಟಕ ದಿನಪತ್ರಿಕೆಯ ಲವಲವಿಕೆ ವಿಭಾಗದಲ್ಲಿ ಮುಖ್ಯ ಉಪಸಂಪಾದಕಿ. ಇವರು ಬರೆದ ಕವನ, ಕಥೆ, ಪ್ರಬಂಧಗಳು ಹಲವೆಡೆ ಪ್ರಕಟವಾಗಿವೆ. ...
READ MORE