ಕಥೆಗಳ ಸೂಡು

Author : ಅಮರೇಶ ನುಗಡೋಣಿ

Pages 314

₹ 225.00




Year of Publication: 2019
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು-02
Phone: 08022107704

Synopsys

ಸಾಹಿತ್ಯದ ಹಲವು ಮಜಲುಗಳಲ್ಲಿ ಕೆಲಸ ಮಾಡಿರುವ ಅಮರೇಶ ನುಗಡೋಣಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅವರ ಕವನ ಸಂಕಲನಗಳು- ನೀನು, ಅವನು, ಪರಿಸರ. ಕಥಾ ಸಂಕಲನ- ಮಣ್ಣು ಸೇರಿತು ಬೀಜ, ಅರಿವು (ನವಸಾಕ್ಷರರಿಗಾಗಿ), ತಮಂಧದ ಕೇಡು, ಮುಸ್ಸಂಜೆಯ ಕಥಾನಕಗಳು, ಸವಾರಿ, ಹಾಗೂ ವ್ಯಕ್ತಿ ಪರಿಚಯ ಕೃತಿಯಲ್ಲಿ ಶ್ರೀಕೃಷ್ಣ ಆಲನಹಳ್ಳಿ (ಬದುಕು ಬರಹ) ರಚಿಸಿದ್ದಾರೆ.

ನವ್ಯೋತ್ತರ ಸಾಹಿತ್ಯದ ಲೇಖಕರ ಸಾಲಿನಲ್ಲಿ ನುಗಡೋಣಿಯವರ ಕಥಾ ಸಾಹಿತ್ಯಕ್ಕೆ ವಿಶಿಷ್ಟವಾದ ಸ್ಥಾನವಿದೆ. ಇವರ ಒಟ್ಟು ಕಥೆಗಳಲ್ಲಿ ಆಯ್ದ ಕಥೆಗಳನ್ನು ಒಳಗೊಂಡಂತೆ ಈ ಸಂಕಲನವನ್ನು ಕಟ್ಟಿಕೊಡಲಾಗಿದೆ. ಸಮಾಜದಲ್ಲಿ ನಡೆದ ಯಾವುದೇ ಒಂದು ಘಟನೆಯನ್ನು ವ್ಯಕ್ತಿಯು ತನ್ನ ಜೀವನಾನುಭವದ ದೃಷ್ಟಿಕೋನದಿಂದ ಒಂದು ನಿಲುವುಗೆ ಚೌಕಟ್ಟಾಗುತ್ತಾನೆ. ಗ್ರಹಿಕೆ ಮುಖ್ಯವಾಗಿ ವ್ಯಕ್ತಿಯು ಹುಟ್ಟಿದ ಜಾತಿ, ವರ್ಗ, ಪರಿಸರ ಮತ್ತು ಸಿದ್ಧಾಂತಗಳ ಪ್ರಭಾವ ಆವರಿಸಿಕೊಂಡಿರುತ್ಗೊಂತದೆ.  ಹೀಗೆ ಹಲವು ಪ್ರಮುಖ ವಿಷಯಗಳನ್ನು ಕಥಾ ವಸ್ತುವನ್ನಾಗಿಸಿಕೊಂಡಿದ್ದಾರೆ ಲೇಖಕ ಅಮರೇಶ ನುಗಡೋಣಿ.

About the Author

ಅಮರೇಶ ನುಗಡೋಣಿ
(02 June 1969)

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನುಗಡೋಣಿಯಲ್ಲಿ 1960 ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದೇವನೂರು ಮಹಾದೇವರ ನಂತರದ ಲೇಖಕರಲ್ಲಿ ಶೋಷಣಾವ್ಯವಸ್ಥೆಯ ವಿವಿಧ ಮುಖಗಳನ್ನು ನುಗಡೋಣಿಯವರಷ್ಟು ಸಮರ್ಥವಾಗಿ ಚಿತ್ರಿಸಿದ ಲೇಖಕರು ಇನ್ನೊಬ್ಬರಿಲ್ಲ ಎಂದು ಹೇಳಬಹುದು. ಸಾಹಿತ್ಯದ ಹಲವು ಮಜಲುಗಳಲ್ಲಿ ಕೆಲಸ ಮಾಡಿರುವ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅವರ ಕವನ ಸಂಕಲನಗಳು- ನೀನು, ಅವನು, ಪರಿಸರ. ಕಥಾ ಸಂಕಲನ- ಮಣ್ಣು ಸೇರಿತು ಬೀಜ, ಅರಿವು (ನವಸಾಕ್ಷರರಿಗಾಗಿ), ತಮಂಧದ ಕೇಡು, ಮುಸ್ಸಂಜೆಯ ಕಥಾನಕಗಳು, ಸವಾರಿ, ಹಾಗೂ ವ್ಯಕ್ತಿ ಪರಿಚಯ ಕೃತಿಯಲ್ಲಿ ಶ್ರೀಕೃಷ್ಣ ಆಲನಹಳ್ಳಿ (ಬದುಕು ...

READ MORE

Related Books