ಕವಿರಾಜ ಮಾರ್ಗವಲ್ಲ ಇದು ಕಾಮರಾಜ ಮಾರ್ಗ

Author : ರವಿ ಬೆಳಗೆರೆ

Pages 400

₹ 250.00




Published by: ಭಾವನಾ ಪ್ರಕಾಶನ
Address: ನಂ. 2, 80 ಫೀಟ್ ರಸ್ತೆ, ಕದಿರೇನಹಳ್ಳಿ ಪೆಟ್ರೋಲ್ ಪಂಪ್ ಹತ್ತಿರ, ಬನಶಂಕರಿ 2ನೇ ಹಂತ ಬೆಂಗಳೂರು-560070
Phone: 080- 2679 0804

Synopsys

ಕವಿರಾಜ ಮಾರ್ಗವಲ್ಲವಿದು ಕಾಮರಾಜ ಮಾರ್ಗ ರಾಜಕಾರಣಿಗಳ ವೈಯಕ್ತಿಕ ಜೀವನವನ್ನು ಕಥಾ ವಸ್ತುವನ್ನಾಗಿಟ್ಟುಕೊಂಡು ಬರೆದಂತಹ ಪುಸ್ತಕ. ರಾಜ್ಯದ ಪ್ರಸಿದ್ಧ ರಾಜಕಾರಣಿಗಳು ಹಾಗೂ ಸಮಾಜದಲ್ಲಿ ಗಣ್ಯ ವ್ಯಕ್ತಿಗಳೆಂದು ಕರೆಸಿಕೊಂಡಂತಹ ವ್ಯಕ್ತಿಗಳ ಯಾವ ರೀತಿ ತಮ್ಮ ರಾಜಕೀಯ ಬೆಳವಣಿಗೆಯನ್ನು ಕಂಡರು ಎಂಬ ಕುರಿತು ಈ ಪುಸ್ತಕ ಬರೆಯಲ್ಪಟ್ಟಿದೆ. ಅಪರಾಧ, ಕಾಮ, ಪ್ರೇಮ, ರಾಜಕಾರಣದ ಚದುರಂಗದಾಟ ಹೀಗೆ ಹಲವು ಒಗ್ಗರಣೆಗಳನ್ನು ಒಳಗೊಂಡಂತಹ ಪುಸ್ತಕವಿದು. ಇದೊಂದು ಕಾದಂಬರಿಯೂ ಹೌದು ಸತ್ಯ ಘಟನೆಗಳೆನ್ನಬಹುದಾದ ಘಟನೆಗಳ ಕಾಲ್ಪನಿಕ ನಿರೂಪಣೆಯೂ ಹೌದು. ಪುಸ್ತಕವನ್ನು ವಿಶ್ಲೇಸಿಸುವ ಅಧಿಕಾರ ಓದುಗರಿಗೆ ಬಿಟ್ಟದ್ದು. ಏಕೆಂದರೆ ಕಾಮವನ್ನು ಪ್ರಧಾನವಾಗಿಟ್ಟುಕೊಂಡು ಬರೆಯಲಾದ ಪುಸ್ತಕವಿದು. ರಾಜಕರಣದಲ್ಲಿ ಅಧಿಕಾರವನ್ನು ಪಡೆಯಲು ಆಕಾಂಕ್ಷಿಗಳು ಏನೆಲ್ಲಾ ಕಸರತ್ತು ಮಾಡುತ್ತಾರೆ ಎಂಬುದರ ವರ್ಣನೆ ಈ ಪುಸ್ತಕದಲ್ಲಿದೆ. 2006ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಕಸರತ್ತು ನಡೆಸಿದ ಒಂದು ರಾಷ್ಟ್ರೀಯ ಪಕ್ಷ ಮತ್ತುಒಂದು ಪ್ರಾದೇಶಿಕ ಪಕ್ಷಗಳ ಡೊಂಬರಾಟದ ಚಿತ್ರಣ ಈ ಪುಸ್ತಕದಲ್ಲಿ ಕಾಣಬಹುದು. ಯಾವ ರೀತಿ ಅಧಿಕಾರದ ಗದ್ದುಗೆ ಹಿಡಿಯಲು ಎರಡೂ ಪಕ್ಷಗಳ ನಾಯಕರು ಮತ್ತು ಜನಪ್ರತಿನಿಧಿಗಳು ರಾಜ್ಯದ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡಿದರು ಎನ್ನುವುದನ್ನು ಕಣ್ಣಿಗೆ ಕಟ್ಟುವ ರೀತಿಯಲ್ಲಿ ರವಿ ಬೆಳಗೆರೆಯವರು ವಿವರಿಸುತ್ತಾರೆ.

About the Author

ರವಿ ಬೆಳಗೆರೆ
(15 March 1958 - 13 November 2020)

ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...

READ MORE

Related Books