ಕಾವ್ಯ ಪ್ರತಿಮೆ

Author : ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ

Pages 296

₹ 250.00




Published by: ಅಂಕಿತ ಪುಸ್ತಕ
Address: #53 ಶ್ಯಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿ ಬಜಾರ್ ಮೈನ್ ರೋಡ್. ಬಸವನಗುಡಿ, ಬೆಂಗಳೂರು - 560004

Synopsys

‘ಕಾವ್ಯಪ್ರತಿಮೆ’ ಕವಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರ ಕೃತಿ. ಕಾವ್ಯದಲ್ಲಿ ಪ್ರತಿಮೆಗಳ ಸ್ವರೂಪ ಕುರಿತ ಚಿಂತನೆಗಳ ಅಧ್ಯಯನವನ್ನು ಈ ಕೃತಿಯು ಒಳಗೊಂಡಿದೆ.  ಕೃತಿಗೆ ಬೆನ್ನುಡಿ ಬರೆದಿರುವ ಯು.ಆರ್. ಅನಂತಮೂರ್ತಿ, ಲಕ್ಷ್ಮೀನಾರಾಯಣ ಭಟ್ಟರು ಕನ್ನಡದ ಪ್ರಸಿದ್ದ ಕವಿ, ವಿಮರ್ಶಕರು. ಅಪಾರವಾದ ವಿದ್ವತ್ತು. ಜೊತೆಗೆ ರಸಗ್ರಹಣ ಶಕ್ತಿ ಈ ಎರಡೂ ಕಾವ್ಯಪ್ರತಿಮೆಯನ್ನು ನಮ್ಮ ಕಾಲದ ಮುಖ್ಯ ಕೃತಿಗಳಲ್ಲಿ ಒಂದೆನ್ನಿಸುವಂತೆ ಮಾಡಿವೆ. ತೀ. ನಂ.ಶ್ರೀ ಅವರ ‘ಭಾರತೀಯ ಕಾವ್ಯ ಮೀಮಾಂಸೆ’ ಗ್ರಂಥದಂತೆ ಭಟ್ಟರ ಕಾವ್ಯಪ್ರತಿಮೆಯೂ ‘ಒಂದು ಆಚಾರ್ಯ ಕೃತಿ’ ಎನ್ನಬಹುದು’ ಎಂದು ಪ್ರಶಂಸಿಸಿದ್ದಾರೆ.

About the Author

ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
(29 October 1936 - 06 March 2021)

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಪ್ರೊ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರು. ಮೂಲತಃ ಶಿವಮೊಗ್ಗದವರಾದ ಅವರು ಸದ್ಯ ಬೆಂಗಳೂರು ನಗರದ ನಿವಾಸಿ. ಅವರ ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಅವರ ಪೂರ್ಣ ಹೆಸರು ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ಟ. ಅವರು ಕವಿ ಮಾತ್ರವಲ್ಲದೆ ವಿಮರ್ಶಕ ಹಾಗೂ ವಾಗ್ಮಿ. ಅವರ ಭಾವಗೀತೆಗಳು ಕ್ಯಾಸೆಟ್‌ಗಳ ಮೂಲಕಜನಪ್ರಿಯಗೊಂಡಿವೆ. ವೃತ್ತ, ಸುಳಿ, ನಿನ್ನೆಗೆ ನನ್ನ ಮಾತು, ದೀಪಿಕಾ ಮತ್ತು ಬಾರೋ ವಸಂತ (ಕವನ ಸಂಗ್ರಹಗಳು), ಹೊರಳು ದಾರಿಯಲ್ಲಿ ಕಾವ್ಯ (ವಿಮರ್ಶೆ), ಜಗನ್ನಾಥ ವಿಜಯ, ಮುದ್ರಾ ಮಂಜೂಷ, ಕರ್ಣ, ಕುಂತಿ, ಕನ್ನಡ ...

READ MORE

Related Books