ಕಾವ್ಯದಲ್ಲಿ ಲಯ ಒಂದು ಮೀಮಾಂಸೆ

Author : ಜಿ. ಎಸ್. ಸಿದ್ಧಲಿಂಗಯ್ಯ

Pages 79

₹ 80.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-
Phone: 08040114455

Synopsys

ಜಿ.ಎಸ್. ಸಿದ್ಧಲಿಂಗಯ್ಯ ಅವರು ಬರೆದ ಕಾವ್ಯದ ಬಗೆಗಿನ ಲೇಖನಗಳ ಸಂಗ್ರಹ ‘ಕಾವ್ಯದಲ್ಲಿ ಲಯ ಒಂದು ಮೀಮಾಂಸೆ’. ಲಯಬದ್ಧವಾದ ಕಾವ್ಯಗಳ ರಚನೆಯ ಬಗೆಗೆ ಕಾವ್ಯ ಮೀಮಾಂಸೆಯ ಪರಿಚಯ ಸೇರಿದಂತೆ ಅನೇಕ ವಿಚಾರಗಳನ್ನು ಈ ಕೃತಿ ಒಳಗೊಂಡಿದೆ. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿ ಬರೆದಿದ್ದಾರೆ. 66ನೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಂಡ ಕೃತಿಯಿದು.

About the Author

ಜಿ. ಎಸ್. ಸಿದ್ಧಲಿಂಗಯ್ಯ
(20 February 1931)

ಕನ್ನಡ ಸಾಹಿತ್ಯ ಪರಿಷತ್ತಿನ 17ನೇ (1988-1992) ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ಧಲಿಂಗಯ್ಯ, ವಚನ ಸಾಹಿತ್ಯ ವಿದ್ವಾಂಸರು, ಶಿಕ್ಷಣ ತಜ್ಞರು, ಕವಿಗಳು ಆಗಿದ್ದರು. ತುಮಕೂರು ಜಿಲ್ಲೆಯ ಬೆಳ್ಳಾವೆಯಲ್ಲಿ 1931 ರ ಫೆ. 20 ರಂದು ಜನನ.  ಮೈಸೂರು ವಿ.ವಿ. ಮಹಾರಾಜ ಕಾಲೇಜಿನಿಂದ ಬಿ.ಎ. ಮೈಸೂರು ವಿ.ವಿ.ಯಿಂದ 1961ರಲ್ಲಿ ಎಂ.ಎ. ಪದವೀಧರರು. ಸರ್ಕಾರಿ ಕಾಲೇಜಿನ ಅಧ್ಯಾಪಕ-ಪ್ರಾಧ್ಯಾಪಕ-ಪ್ರಾಂಶುಪಾಲರಾಗಿ ನಂತರ 1988 ರಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾಗಿ ನಿವೃತ್ತರಾದರು. ವಿಮರ್ಶೆ : ಮಹಾನುಭಾವ ಬುದ್ಧ, ಕವಿ ಲಕ್ಷ್ಮೀಶ, ಚಾಮರಸ, ಹೊಸಗನ್ನಡ ಕಾವ್ಯ, ಕವನ ಸಂಕಲನ : ಉತ್ತರ, ಚಿತ್ರ-ವಿಚಿತ್ರ, ಐವತ್ತರ ನೆರಳು, ಹಾಗೂ ಸಂಪಾದನೆ ...

READ MORE

Related Books