ಕಾವ್ಯಾರ್ಥ ಚಿಂತನ

Author : ಜಿ.ಎಸ್. ಶಿವರುದ್ರಪ್ಪ

Pages 260

₹ 200.00




Year of Publication: 2010
Published by: ಪ್ರಿಯದರ್ಶಿನಿ ಪ್ರಕಾಶನ
Address: # ನಂ.138, 7ನೇ ಸಿ ಮುಖ್ಯರಸ್ತೆ, ಹಂಪಿನಗರ, ಬೆಂಗಳೂರು-104

Synopsys

ಸಾಹಿತಿ ಡಾ. ಜಿ.ಎಸ್. ಶಿವರುದ್ರಪ್ಪ ಅವರ ಕೃತಿ-ಕಾವ್ಯಾರ್ಥ ಚಿಂತನ. ಈ ಕೃತಿಯು 1984 ರಲ್ಲಿ 'ಕೇಂದ್ರ ಸಾಹಿತ್ಯ ಅಕಾಡೆಮಿ'ಯ ಪ್ರಶಸ್ತಿ ತಂದುಕೊಟ್ಟಿದೆ. ಕಾವ್ಯ ಮೀಮಾಂಸೆ ಮತ್ತು ದೃಶ್ಯಕಾವ್ಯವನ್ನು ವಿಮರ್ಶೆ ಮಾಡುವ ತೌಲನಿಕ ವಿಮರ್ಶೆ ಸಾಹಿತ್ಯದ ಕೃತಿ ಇದು. ಕಾವ್ಯ ಎಂದರೇನು? ಕವಿ ಯಾರು? ಅವನಲ್ಲಿ ಇರಬೇಕಾದ ಅಂಶಗಳು ಏನು ಇತ್ಯಾದಿ ವಿಮರ್ಶಾತ್ಮಕವಾಗಿ ತಿಳಿಯಲು ಈ ಕೃತಿಯು ಉತ್ತಮ ಆಕರ ಗ್ರಂಥ.

About the Author

ಜಿ.ಎಸ್. ಶಿವರುದ್ರಪ್ಪ
(07 February 1926 - 23 December 2013)

ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...

READ MORE

Related Books