ಕಾವ್ಯಶೋಧಕ

Author : ಎಚ್.ಆರ್. ರಾಮಕೃಷ್ಣರಾವ್

Pages 62

₹ 60.00




Year of Publication: 2014
Published by: ಉದಯಭಾನು ಕಲಾಸಂಘ
Address: ಉದಯಭಾನು ಕಲಾಸಂಘ, ಗವೀಪುರ ಸಾಲು ಛತ್ರಗಳ ಎದುರು, ರಾಮಕೃಷ್ಣಮಠ ಬಡಾವಣೆ ಕೆಂಪೇಗೌಡನಗರ, ಬೆಂಗಳೂರು- 560019
Phone: 080-26609343 / 26601831

Synopsys

ವರಕವಿ ದ.ರಾ. ಬೇಂದ್ರೆಯವರ ಸಾಹಿತ್ಯ ಕೃಷಿಯನ್ನು ನಿರಂತರವಾಗಿ ಅಧ್ಯಯನ ಮಾಡಿದವರು ಜಿ. ಕೃಷ್ಣಪ್ಪ. ಅವರು ’ಬೇಂದ್ರೆ ಕೃಷ್ಣಪ್ಪ’ ಎಂದೇ ಪ್ರಸಿದ್ಧರು. ಕೃಷ್ಣಪ್ಪ ಅವರ ಬದುಕು- ಬರಹವನ್ನು ಪರಿಚಯಿಸುವ ಉದ್ದೇಶದಿಂದ ಉದಯಭಾನು ಸಂಸ್ಥೆ ಕೃತಿಯನ್ನು ಹೊರತಂದಿದೆ. ಕೃಷ್ಣಪ್ಪನವರ ಬರಹಗಳನ್ನು ಕೃತಿಯಲ್ಲಿ ನೀಡಿರುವುದಲ್ಲದೆ ಅವರ ಕುರಿತು ವಿವಿಧ ಲೇಖಕರು ಬರೆದ ಬರಹಗಳೂ ಇಲ್ಲಿವೆ. ಕೃತಿಯನ್ನು ಸಂಪಾದಿಸಿರುವ ಪ್ರೊ. ಎಚ್. ಆರ್. ರಾಮಕೃಷ್ಣರಾವ್ ಮತ್ತು ಎಂ. ನರಸಿಂಹ ಅವರು ಕಾವ್ಯ ಶೋಧಕ ಎಂಬ ಅರ್ಥಗರ್ಭಿತ ಶೀರ್ಷಿಕೆಯನ್ನು ಕೃತಿಗೆ ನೀಡಿದ್ದಾರೆ.

About the Author

ಎಚ್.ಆರ್. ರಾಮಕೃಷ್ಣರಾವ್
(30 May 1935)

ಪ್ರೊ. ಎಚ್.ಆರ್. ರಾಮಕೃಷ್ಣರಾವ್ ಅವರು ಕ್ರೈಸ್ಟ್ ಕಾಲೇಜಿನ ನಿವೃತ್ತ ಭೌತವಿಜ್ಞಾನ ಪ್ರಾಧ್ಯಾಪಕರು. ಉದಯಭಾನು ಉನ್ನತ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಮತ್ತು ಬೆಂಗಳೂರು ವಿಜ್ಞಾನ ವೇದಿಕೆಯ ಖಜಾಂಚಿಯಾಗಿ ಕೆಲಸ ಮಾಡುತ್ತಿದ್ದಾರೆ. ಖಭೌತ ವಿಜ್ಞಾನ ಇವರ ಆಸಕ್ತ ವಿಷಯವಾಗಿದ್ದು  ತಮ್ಮಲ್ಲಿದ್ದ ದೂರದರ್ಶಕವನ್ನು ಕರ್ನಾಟಕದ ಹಳ್ಳಿ-ಹಳ್ಳಿಗಳಿಗೆ ಹೋಗಿ ಜನರಿಗೆ ಆಕಾಶ ವೀಕ್ಷಣೆ ಮಾಡಿಸಿ, ವೈಜ್ಞಾನಿಕ ಅರಿವನ್ನು ಮೂಡಿಸಿದ್ದಾರೆ.  ಸಂಕ್ಷಿಪ್ತ ಖಗೋಳ ವಿಜ್ಞಾನ ಚರಿತ್ರೆ, ಕಲಾಂ ಮೇಷ್ಟ್ರು, 20ನೇ ಶತಮಾನದ ಭೌತವಿಜ್ಞಾನ, ಒಲವಿನ ಶಿಲೆ ಅಯಸ್ಕಾಂತ, ಅಂತರಿಕ್ಷ, ಶುಕ್ರಸಂಕ್ರಮ, ಬಿಗ್ ಬ್ಯಾಂಗ್, ಪ್ರಳಯ 2012, ಮುಂತಾದವುಗಳು ಇವರ ಪ್ರಮುಖ ಕೃತಿಗಳು.  ...

READ MORE

Related Books